ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮುಂದುವರಿಸಿದೆ. ಇಂದು ಒಂದೇ ದಿನ 6997 ಮಂದಿ ಮೇಲೆ ಅಟ್ಯಾಕ್ ಮಾಡಿದೆ. ಅಲ್ಲದೇ,38 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ.ಹೀಗಾಗಿ ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 540847 ಕ್ಕೆ ಏರಿಕೆಯಾಗಿದೆ. ರಾಜ್ಯದಲ್ಲಿ ಈವರೆಗೆ 437910 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.
ಇಂದು ಸಿಲಿಕಾನ್ ಸಿಟಿಯಲ್ಲಿ ಮಹಾಮಾರಿ ಕೊರೊನಾ ವೈರಸ್ 3547 ಮಂದಿಗೆ ವಕ್ಕರಿಸಿದೆ. ಬೆಂಗಳೂರು ಒಂದರಲ್ಲೇ 23 ಮಂದಿ ಸೋಂಕಿತರು ಪ್ರಾಣ ಕಳೆದುಕೊಂಡಿದೆ .ಸಂಖ್ಯೆ ನಗರದಲ್ಲಿ ಇಂದು 3536 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.ನಗರದಲ್ಲಿ ಸಕ್ರಿಯ ಪ್ರಕರಣದ 39971 ಮಂದಿಯಲ್ಲಿ ಪತ್ತೆಯಾಗಿದೆ.
ಮಂಗಳೂರು:- ದ.ಕ ಜಿಲ್ಲೆಯಲ್ಲಿ ಇಂದು ಕೂಡ ಕೊರೊನಾ ರಣಕೇಕೆ ಹಾಕಿದೆ. ಇಂದು ಕೂಡ 186 ಮಂದಿಗೆ ಸೋಂಕು ತಗುಲಿದೆ. 221 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಒಟ್ಟು ಸೋಂಕಿತರ ಸಂಖ್ಯೆ 20764 ಆಗಿದ್ದು, ಇಲ್ಲಿಯವರೆಗೆ 15716 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.4554 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಒಟ್ಟು ಜಿಲ್ಲೆಯಲ್ಲಿ 494 ಮಂದಿ ಸೊಂಕಿಗೆ ಬಲಿಯಾಗಿದ್ದಾರೆ.
ಉಡುಪಿ ಜಿಲ್ಲೆಯಲ್ಲಿ 102 ಮಂದಿಗೆ ಪತ್ತೆಯಾಗಿದೆ. ಒಟ್ಟು ಸೊಂಕಿತರ ಸಂಖ್ಯೆ 15840 ಆಗಿದ್ದು ,ಇಲ್ಲಿಯವರೆಗೆ 13978 ಮಂದಿ ಡಿಸ್ಚಾರ್ಜ್ ಆಗಿದ್ದಾರೆ.1719 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.