- Advertisement -
- Advertisement -
ಬೆಂಗಳೂರು: ಕಲ್ಯಾಣ ಮಂಟಪ, ಹೋಟೆಲ್, ಪಾರ್ಟಿ ಹಾಲ್ ಮತ್ತು ರೆಸಾರ್ಟ್ಗಳಲ್ಲಿ 40 ಜನಕ್ಕೆ ಸೀಮಿತಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಹೊಸದಾಗಿ ಕಾಣಿಸಿಕೊಳ್ತಿರುವ ಡೆಲ್ಟಾ ಪ್ಲಸ್ ವೈರಸ್ ಸೋಂಕಿನ ನಿಯಂತ್ರಣ ಸಂಬಂಧ ರಾಜ್ಯ ಸರ್ಕಾರ ಇಂದು ಮಹತ್ವದ ಸಭೆ ನಡೆಸಿತು. ಈ ಸಭೆಯಲ್ಲಿ ಕೋವಿಡ್ 19ರ ರೂಪಾಂತರಿ ಡೆಲ್ಟಾ ಪರಿಸ್ಥಿತಿ ಬಗ್ಗೆ ಪರಾಮರ್ಶೆ ನಡೆಯಿತು. ರಾಜ್ಯದಲ್ಲಿ ಡೆಲ್ಟಾ ವೈರಸ್ ಸದ್ಯಕ್ಕೆ ಹತೋಟಿಯಲ್ಲಿದ್ದು ವೈರಸ್ ಬಗ್ಗೆ ತೀವ್ರ ನಿಗಾ ಇಡಲು ಸೂಚನೆ ಸಿಕ್ಕಿದೆ.

ಮಹಾರಾಷ್ಟ್ರದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಡೆಲ್ಟಾ ವೈರಸ್ ಕಂಡುಬರುತ್ತಿದೆ ಬಾರ್ಡರ್ಗಳಲ್ಲಿ ಕಟ್ಟೆಚ್ಚರ ವಹಿಸುವಂತೆ ಸೂಚನೆ ನೀಡಲಾಯಿತು.

ಸರ್ಕಾರದ ನಿರ್ಧಾರವೇನು?
- ಮಹಾರಾಷ್ಟ್ರ ಮತ್ತು ಕೇರಳದಿಂದ ಬರುವವರ ಬಗ್ಗೆ ತೀವ್ರ ನಿಗಾ ಇಡುವುದು, ಅವರನ್ನ ಕೊರೊನಾ ಟೆಸ್ಟ್ಗೆ ಒಳಪಡಿಸುವುದು
- ಅಪೌಷ್ಟಿಕತೆ ಇರುವ ಮಕ್ಕಳನ್ನು ಗುರುತಿಸಿ ಅವರಿಗೆ ಸೂಕ್ತ ಪೌಷ್ಟಿಕ ಆಹಾರ ಒದಗಿಸುವುದು, ಅಲ್ಲದೇ ಸೂಕ್ತ ವೈದ್ಯಕೀಯ ನಿಗಾ ವಹಿಸಲು ಸೂಚನೆ
- ಕಲ್ಯಾಣ ಮಂಟಪ, ಹೋಟೆಲ್ ಪಾರ್ಟಿ ಹಾಲ್ ಮತ್ತು ರೆಸಾರ್ಟ್ಗಳಲ್ಲಿ 40 ಜನಕ್ಕೆ ಸೀಮಿತಗೊಳಿಸಿ ಅನುಮತಿ, ವೈಯಕ್ತಿಕ ಪಾಸ್ಗಳೊಂದಿಗೆ ಸೋಮವಾರದಿಂದ ಜಾರಿ
- ಮದುವೆ ಸಮಾರಂಭಗಳಿಗೂ 40 ಜನಕ್ಕೆ ಅನುಮತಿ


- Advertisement -