Monday, June 30, 2025
spot_imgspot_img
spot_imgspot_img

ರಾಜ್ಯ ಸರ್ಕಾರ ಮಹಿಳೆಯರ ಸುರಕ್ಷತೆಗೆ ಬದ್ಧವಾಗಿದೆ -ಯೋಗಿ ಆದಿತ್ಯನಾಥ್

- Advertisement -
- Advertisement -

ಲಖನೌ: ಹತ್ರಾಸ್ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ರಾಜ್ಯ ಸರ್ಕಾರದ ವಿರುದ್ಧ ಭಾರೀ ಆಕ್ರೋಶ ಭುಗಿಲೆದ್ದಿದೆ.
ಈ ಎಲ್ಲಾ ಆರೋಪಗಳಿಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜ್ಯ ಸರ್ಕಾರ ಮಹಿಳೆಯರ ಸುರಕ್ಷತೆಗೆ ಬದ್ಧವಾಗಿದೆ ಎಂದು ಭರವಸೆ ನೀಡಿದ್ದಾರೆ.


ಈ ಕುರಿತು ಟ್ವೀಟ್ ಮಾಡಿರುವ ಯೋಗಿ ಆದಿತ್ಯನಾಥ್, ರಾಜ್ಯ ಸರ್ಕಾರ ಮಹಿಳೆಯರ ಸುರಕ್ಷತೆಗೆ ಬದ್ಧವಾಗಿದ್ದು ಯಾರೂ ಆತಂಕಪಡಬೇಕಿಲ್ಲ ಎಂದು ಭರವಸೆ ನೀಡಿದ್ದಾರೆ.

ರಾಜ್ಯದ ಮಹಿಳೆಯರೊಂದಿಗೆ ದುರ್ವತನೆ ತೋರುವ ರಾಕ್ಷಸರಿಗೆ ಶಿಕ್ಷೆ ನಿಶ್ಚಿತ ಎಂದಿರುವ ಯೋಗಿ ಆದಿತ್ಯನಾಥ್, ನಾವು ನೀಡುವ ಶಿಕ್ಷೆ ಭವಿಷ್ಯದಲ್ಲಿ ಉದಾಹರಣೆಯಾಗಿ ನಿಲ್ಲಲಿದೆ ಎಂದು ಮಾರ್ಮಿಕವಾಗಿ ಹೇಳಿದ್ದಾರೆ.

ರಾಜ್ಯದ ಸಹೋದರಿಯರು ಯಾವುದೇ ಕಾರಣಕ್ಕೂ ಆತಂಕಪಡುವ ಅವಶ್ಯಕತೆಯಿಲ್ಲ. ಅವರ ಸುರಕ್ಷತೆಗೆ ನಾವು ವಚನಬದ್ಧರಾಗಿದ್ದು, ಹತ್ರಾಸ್ ದುರುಳರನ್ನು ಶಿಕ್ಷಿಸದೇ ಬಿಡುವುದಿಲ್ಲ ಎಂದು ಯೋಗಿ ಆದಿತ್ಯನಾಥ್ ಎಂದು ಎಚ್ಚರಿಕೆ ನೀಡಿದ್ದಾರೆ.

- Advertisement -

Related news

error: Content is protected !!