Friday, May 3, 2024
spot_imgspot_img
spot_imgspot_img

ಬಸ್​ ನಿಲ್ದಾಣವನ್ನೇ ಕದ್ದೊಯ್ದ ಖದೀಮರು!

- Advertisement -G L Acharya panikkar
- Advertisement -

ಕಳ್ಳರು ಹಣ, ಬೈಕ್ ಸೇರಿದಂತೆ ಕೈಗೆ ಸಿಗುವ ವಸ್ತುಗಳನ್ನು ಕಳ್ಳತನ ಮಾಡುವುದನ್ನು ಕೇಳಿದ್ದೇವೆ. ಇಲ್ಲ, ಮನೆ-ಬ್ಯಾಂಕ್​ಗೆ ನುಗ್ಗಿ ಕೈಗೆ ಸಿಗುವ ಬೆಲೆಬಾಳುವ ವಸ್ತುಗಳನ್ನು ದೋಚಿಕೊಂಡು ಹೋಗುವುದನ್ನು ಕೇಳಿದ್ದೇವೆ. ಆದರೆ, ಬೆಂಗಳೂರಿನಲ್ಲಿ ಪ್ರಯಾಣಿಕರಿಗಾಗಿ ನಿರ್ಮಿಸಲಾಗಿದ್ದ ಬಸ್​ ನಿಲ್ದಾಣವನ್ನೇ ಕದ್ದೊಯ್ದಿದ್ದಾರೆ

ಬೆಂಗಳೂರು ನಗರ ಪೊಲೀಸ್ ಆಯುಕ್ತರ ಕಚೇರಿಯ ಕೊಂಚ ದೂರದಲ್ಲೇ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಪೊಲೀಸ್ ಕಮಿಷನರ್ ಕಚೇರಿಯ ಹಿಂಭಾಗ, ವಿಧಾನಸೌಧದಿಂದ 1 ಕಿ.ಮೀಗಿಂತ ಕಡಿಮೆ ದೂರದಲ್ಲಿರುವ ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ ನಿರ್ಮಿಸಲಾಗಿದ್ದ ಪ್ರಯಾಣಿಕರ ತಂಗುದಾಣವನ್ನು ಕದ್ದೊಯ್ದಿದ್ದಾರೆ. ನಿರ್ಮಿಸಿದ್ದ ಒಂದು ವಾರದೊಳಗೆ ಮಾಯವಾಗಿದ್ದು ಅಚ್ಚರಿಗೆ ಕಾರಣವಾಗಿದೆ.

ಕನ್ನಿಂಗ್ ಹ್ಯಾಮ್ ರಸ್ತೆಯಲ್ಲಿ 10 ಲಕ್ಷ ರೂಪಾಯಿ ವೆಚ್ಚದಲ್ಲಿ ಖಾಸಗಿ ಕಂಪನಿಯೊಂದು ಸ್ಟೀಲ್​ನಿಂದ ಬಿಎಂಟಿಸಿ ಬಸ್ ನಿಲ್ದಾಣವನ್ನು ನಿರ್ಮಿಸಿತ್ತು. ಆದರೆ, ಒಂದು ತಿಂಗಳಲ್ಲಿ ಸ್ಥಳದಿಂದ ಬಸ್​ ನಿಲ್ದಾಣ ನಾಪತ್ತೆಯಾಗಿದೆ. ಕಂಪನಿಯ ಸಹಾಯಕ ಉಪಾಧ್ಯಕ್ಷ ಎನ್ ರವಿ ರೆಡ್ಡಿ ಅವರು ನಿರ್ಮಿಸಲಾಗಿದ್ದ ಬಸ್​ ನಿಲ್ದಾವನ್ನು ನೋಡಲು ಸ್ಥಳಕ್ಕೆ ಬಂದಿದ್ದಾರೆ. ಆದ್ರೆ, ಅಲ್ಲಿ ಬಸ್​ ನಿಲ್ದಾಣ ಇಲ್ಲದಿರುವುದು ಬೆಳಕಿಗೆ ಬಂದಿದೆ.

ಇದರಿಂದ ಅವಕ್ಕಾದ ಎನ್ ರವಿ ರೆಡ್ಡಿ, ಈ ಬಗ್ಗೆ ಬಿಬಿಎಂಪಿ ಬಳಿ ವಿಚಾರಿಸಿದ್ದಾರೆ. ತಂಗುದಾಣವನ್ನು ತಾವು ತೆರುವು ಮಾಡಿಲ್ಲ ಎಂದು ಬಿಬಿಎಂಪಿ ಸಹ ಹೇಳಿದ್ದು, ಬಳಿಕ ಕಂಪನಿ ಈ ಘಟನೆ ಸಂಬಂಧ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಈ ದೂರಿನ ಮೇರೆಗೆ ಪೊಲಿಸರು ಕದ್ದುಕೊಂಡು ಹೋಗಿರುವ ಆರೋಪಿಗಳ ಬಂಧನಕ್ಕೆ ಬಲೆ ಬೀಸಿದ್ದು, ಬಸ್​ ನಿಲ್ದಾಣದ ಅಕ್ಕ-ಪಕ್ಕದ ಸಿಸಿಟಿವಿಗಳನ್ನು ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!