Saturday, May 11, 2024
spot_imgspot_img
spot_imgspot_img

ಬೆಳ್ತಂಗಡಿ: ಸುಲಿಯದ 25 ಗೋಣಿ ಚೀಲ ಅಡಿಕೆ ಕಳವು..!

- Advertisement -G L Acharya panikkar
- Advertisement -

ಬೆಳ್ತಂಗಡಿ : ಗೋದಾಮಿ ನಲ್ಲಿಟ್ಟಿದ್ದ ಸುಲಿಯದ 25 ಗೋಣಿ ಚೀಲ ಅಡಿಕೆ ಕಳವುಗೈದ ಘಟನೆ ಬೆಳ್ತಂಗಡಿಯ ತಣ್ಣೀರುಪಂಥ ಎಂಬಲ್ಲಿ ನಡೆದಿದೆ.

ತಣ್ಣೀರುಪಂಥ ನಿವಾಸಿ ಅಬ್ದುಲ್ ಹಕೀಂ ಎಂಬವರು ಎ.2ರಂದು ಸಂಜೆಯ ವೇಳೆ ಸುಲಿಯದ ಅಡಿಕೆಯನ್ನು 75 ಗೋಣಿ ಚೀಲಗಳಲ್ಲಿ ತುಂಬಿಸಿ ಮನೆ ಸಮೀಪವೇ ಇರುವ ಗೋದಾಮಿನಲ್ಲಿ ಇಟ್ಟು ಬೀಗ ಹಾಕಿದ್ದರು. ಎ 3ರಂದು ಬೆಳಗ್ಗೆ ನೋಡಿದಾಗ ಗೋದಾಮಿನ ಬಾಗಿಲು ತುಂಡಾಗಿ ಬಿದ್ದಿರುವುದು ಕಂಡುಬಂದಿದ್ದು ಪರಿಶೀಲಿಸಿದಾಗ ಗೋದಾಮಿನ ಒಳಗಿದ್ದ 25 ಅಡಿಕೆ ಚೀಲಗಳು ಕಳವಾಗಿರುವುದು ಕಂಡುಬಂದಿದೆ. ಕಳ್ಳತನವಾಗಿರುವ ಅಡಿಕೆಯ ಒಟ್ಟು ಮೌಲ್ಯ 1,35,000 ರೂ. ಎಂದು ಅಂದಾಜಿಸಲಾಗಿದೆ.
ಈ ಬಗ್ಗೆ ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!