- Advertisement -
- Advertisement -
ಚಿಕ್ಕಬಳ್ಳಾಪುರಿನ ಮೊರಾರ್ಜಿ ದೇಸಾಯಿ ವಸತಿ ಶಾಲೆಯ 8ನೇ ತರಗತಿ ವಿದ್ಯಾರ್ಥಿನಿ ಸಾವನ್ನಪ್ಪಿರುವಂತಹ ಘಟನೆ ಚಿಂತಾಮಣಿ ತಾಲೂಕಿನ ಗಡಿಗವಾರಹಳ್ಳಿಯಲ್ಲಿ ನಡೆದಿದೆ.ವಿದ್ಯಾರ್ಥಿನಿ ತನುಶ್ರೀ ಮೃತ ಪಟ್ಟಿದ್ದಾರೆ. ರಾತ್ರಿ ಊಟ ಮಾಡಿ ಮಲಗಿದ್ದ ವಿದ್ಯಾರ್ಥಿನಿ ಬೆಳಗ್ಗೆ ತೀವ್ರ ಅಸ್ವಸ್ಥಳಾಗಿದ್ದರಿಂದ ವಿದ್ಯಾರ್ಥಿನಿಯನ್ನು ಚಿಂತಾಮಣಿ ತಾಲೂಕು ಆಸ್ಪತ್ರೆಗೆ ದಾಖಲಿಸಿಲಾಯಿತು. ಆದರೆ ಚಿಕಿತ್ಸೆ ಫಲಿಸದೆ ವಿದ್ಯಾರ್ಥಿನಿ ಮೃತಪಟ್ಟಿದ್ದಾಳೆ.
ವಿದ್ಯಾರ್ಥಿನಿ ತನುಶ್ರೀ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದು, ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.
- Advertisement -