Wednesday, May 1, 2024
spot_imgspot_img
spot_imgspot_img

ವಿದ್ಯಾರ್ಥಿಗಳನ್ನು ಬೆತ್ತಲೆಗೊಳಿಸಿ ಹಲ್ಲೆ; ಶಿಕ್ಷಕನ ಬಂಧನ

- Advertisement -G L Acharya panikkar
- Advertisement -

ದೈಹಿಕ ಶಿಕ್ಷಕನೊಬ್ಬ ಅಪ್ರಾಪ್ತ ವಿದ್ಯಾರ್ಥಿಗಳ ಪ್ಯಾಂಟ್ ಬಿಚ್ಚಿಸಿ, ಅವರನ್ನು ಗ್ರೌಂಡ್‌ನಲ್ಲಿ ಓಡಿಸಿ ಅಮಾನವೀಯವಾಗಿ ನಡೆದುಕೊಂಡಿರುವ ಘಟನೆ ಬೀದರ್ ಜಿಲ್ಲೆಯ ಹುಮ್ನಾಬಾದ್ ಪಟ್ಟಣದ ನಗರೇಶ್ವರಿ ಹಿರಿಯ ಪ್ರಾಥಮಿಕ ಹಾಗೂ ಪ್ರೌಢ ಶಾಲೆಯಲ್ಲಿ ನಡೆದಿದೆ.

ರಮೇಶ್ ಅಮಾನವೀಯ ಕೃತ್ಯ ಎಸಗಿದ ದೈಹಿಕ ಶಿಕ್ಷಕ. ವಿದ್ಯಾರ್ಥಿಗಳು ಹೇಳಿದ್ದನ್ನು ಕೇಳದೇ ಇದ್ದರೆ ಅವರ ಪ್ಯಾಂಟ್ ಬಿಚ್ಚಿಸಿ ಚಡ್ಡಿ ಮೇಲೆ ಓಡಿಸುತ್ತಿದ್ದ. ಅರೆಬೆತ್ತಲೆಗೊಳಿಸಿ ಗ್ರೌಂಡ್‌ನಲ್ಲಿ ಓಡಿಸಿದ್ದಲ್ಲದೇ ವಿದ್ಯಾರ್ಥಿಗಳಿಗೆ ಹಿಂಸೆ ನೀಡುತ್ತಿದ್ದ ಹಾಗೂ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುತ್ತಿದ್ದ.

ಘಟನೆ 15 ದಿನಗಳ ಹಿಂದೆ ನಡೆದಿದ್ದು, ಶಾಲೆಗೆ ಹುಮ್ನಾಬಾದ್ ಡಿವೈಎಸ್‌ಪಿ ನ್ಯಾಮೇಗೌಡರ್ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿದಾಗ ದೈಹಿಕ ಶಿಕ್ಷಕನ ಕೃತ್ಯ ಬೆಳಕಿಗೆ ಬಂದಿದೆ. ಶಿಕ್ಷಕ ಶಾಲೆ ಮುಗಿದ ಮೇಲೂ ಹೆಚ್ಚುವರಿಯಾಗಿ 2 ಗಂಟೆ ದೈಹಿಕ ಪಾಠ ಮಾಡುತ್ತಿದ್ದ.

ಈ ಬಗ್ಗೆ ಖಾಸಗಿ ಶಾಲೆಯ ಮ್ಯಾನೇಜ್‌ಮೆಂಟ್‌ನಿಂದ ದೂರು ದಾಖಲಾಗಿದೆ. ದೂರಿನ್ವಯ ಹುಮ್ನಾಬಾದ್ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಶಿಕ್ಷಕನ ವಿರುದ್ಧ ಪೋಕ್ಸೋ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ಶಿಕ್ಷಕನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ.

- Advertisement -

Related news

error: Content is protected !!