- Advertisement -
- Advertisement -
ಸುಬ್ರಹ್ಮಣ್ಯ : ಕುಕ್ಕೇ ದೇವಾಲಯಕ್ಕೆ ಬಂದ ಯಾತ್ರಾರ್ಥಿಯೋರ್ವರ ಪಾರ್ಕಿಂಗ್ ಸ್ಥಳದಲ್ಲಿದ್ದ ಕಾರಿನ ಗಾಜು ಒಡೆದು ಚಿನ್ನ ಕಳವು ಮಾಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಹೊನ್ನವಳ್ಳಿ ಮೂಲದ ಪ್ರಭಾಕರ್ (35) ಬಂಧಿತ ಆರೋಪಿ. ಈತ ಸುಬ್ರಹ್ಮಣ್ಯ ಪಾರ್ಕಿಂಗ್ ಸ್ಥಳದಲ್ಲಿ ಕಾರಿನ ಗಾಜು ಒಡೆದು ಚಿನ್ನವನ್ನು ಕದ್ದಿದ್ದು, ಈತನನ್ನು ಸುಬ್ರಹ್ಮಣ್ಯ ರೈಲು ನಿಲ್ದಾಣ ಬಳಿ ಬಂಧಿಸಿ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ. ಈತನು ಖತರ್ನಾಕ್ ಖದೀಮನಾಗಿದ್ದು, 15 ದಿನದ ಹಿಂದೆ ಧರ್ಮಸ್ಥಳದಲ್ಲಿ 40 ಗ್ರಾಂ ಚಿನ್ನವನ್ನು ಇದೇ ಮಾದರಿಯಲ್ಲಿ ಕದ್ದಿದ್ದು, ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸರ ಮುಂದೆ ಒಪ್ಪಿಕೊಂಡಿರುತ್ತಾನೆ.
ಈತನ ವಿರುದ್ದ ಈಗಾಗಲೇ ಹೊನ್ನವಳ್ಳಿ ಸೇರಿದಂತೆ ಇತರ ಪೊಲೀಸ್ ಠಾಣೆಗಳಲ್ಲಿ ಕಳ್ಳತನ ಪ್ರಕರಣ ದಾಖಲಾಗಿದೆ. ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.
- Advertisement -