- Advertisement -
- Advertisement -
ಸುಬ್ರಹ್ಮಣ್ಯ: ಮಲೆಯಾಳ ಐನಕಿದು ರಸ್ತೆಯ ಕೆದಿಲ ಬಳಿ ರಸ್ತೆಯಲ್ಲಿ ಎಂಟು ಕಾಡಾನೆಗಳ ಹಿಂಡು ಕಾಣಿಸಿಕೊಂಡಿದ್ದು, ವಾಹನ ಸವಾರರು ಆತಂಕಕ್ಕೊಳಗಾದ ಘಟನೆ ನಡೆದಿದೆ.
ಎಂಟು ಆನೆಗಳಿರುವ ಹಿಂಡು ಜನರಲ್ಲಿ ಭಯ ಮೂಡಿಸಿದೆ. ಈ ಮಾರ್ಗ ಕಾಡಿನೊಳಗೆ ಹಾದು ಹೋಗಿದ್ದು ದಾರಿ ಮಧ್ಯೆ ಯಾವುದೇ ಮನೆಗಳಿಲ್ಲ. ಆನೆಗಳ ಉಪಟಳದಿಂದ ಸ್ಥಳೀಯರಲ್ಲಿ ಆತಂಕ ಸೃಷ್ಟಿಯಾಗಿದೆ.
ಸುಬ್ರಹ್ಮಣ್ಯದಿಂದ ಈ ಮಾರ್ಗವಾಗಿ ತೆರಳುವವರು ಎಚ್ಚರಿಕೆ ವಹಿಸುವಂತೆ ಸ್ಥಳೀಯರಿಗೆ ಸೂಚಿಸಲಾಗಿದೆ. ಕಲ್ಮಕಾರು ಕಾಡಿನ ದಾರಿಯಲ್ಲಿ ತೆರಳಿದ್ದ ವೃದ್ಧರೊಬ್ಬರ ಮೇಲೆ ಕಾಡಾನೆ ದಾಳಿ ನಡೆಸಿದ್ದು, ಅವರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.
- Advertisement -