- Advertisement -
- Advertisement -
ಸುಬ್ರಹ್ಮಣ್ಯ:-ಕುಕ್ಕೆ ಸುಬ್ರಹ್ಮಣ್ಯ ದೇಗುಲದ ವತಿಯಿಂದ ನಡೆಯುತ್ತಿರುವ ಮಾಸ್ಟರ್ ಪ್ಲಾನ್ ಕಾಮಗಾರಿಗಳ ಹಿನ್ನೆಲೆಯಲ್ಲಿ ಕುಕ್ಕೆ ಸುಬ್ರಹ್ಮಣ್ಯದ ರಥ ಬೀದಿಯಲ್ಲಿನ ಕಟ್ಟಡಗಳ ತೆರವು ಕಾರ್ಯ ನಡೆಯಿತು.
ಕುಕ್ಕೇ ಸುಬ್ರಹ್ಮಣ್ಯದಲ್ಲಿ ನಡೆಯುತ್ತಿರುವ ಮಾಸ್ಟರ್ ಪ್ಲಾನ್ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಪಟ್ಟಂತೆ ಇಂದು ದೇವಸ್ಥಾನದ ಆಡಳಿತಾಧಿಕಾರಿ ಎಂ.ಜೆ ರೂಪ ಹಾಗೂ ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನದ ಅಧಿಕಾರಿಗಳು ಮತ್ತು ಸುಬ್ರಹ್ಮಣ್ಯ ಪೊಲೀಸ್ ಅಧಿಕಾರಿಗಳ ಮುಂದಾಳತ್ವದಲ್ಲಿ ಇಲ್ಲಿನ ಕುಮಾರಕೃಪಾ ಕಟ್ಟಡ ಸೇರಿದಂತೆ ಮಾಸ್ಟರ್ ಪ್ಲಾನ್ ಕಾಮಗಾರಿಗೆ ಅಡ್ಡಿಯಾಗುವಂತಹ ಕಟ್ಟಡಗಳ ತೆರವು ಕಾರ್ಯ ನಡೆಯಿತು.
ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಸ್ಥಳದಲ್ಲಿ ದೇವಸ್ಥಾನದ ಆಡಳಿತಾಧಿಕಾರಿಗಳು, ಕಾರ್ಯನಿರ್ವಾಹಣಾಧಿಕಾರಿ ಸೇರಿದಂತೆ ಸ್ಥಳೀಯ ಅಧಿಕಾರಿಗಳು,ಪೊಲೀಸರು ಉಪಸ್ಥಿತರಿದ್ದರು.
- Advertisement -