ಸುಬ್ರಹ್ಮಣ್ಯ : ತಾಲೂಕಿನ ಕೈಕಂಬ ಮುಖ್ಯ ಜಂಕ್ಷನ್ ಸಮೀಪ ರಸ್ತೆ ದಾಟುತ್ತಿದ್ದ ಟೂರೀಸ್ಟ್ ವಾಹನ ಚಾಲಕನಿಗೆ ಸರ್ಕಾರಿ ಬಸ್ ಡಿಕ್ಕಿ ಹೊಡೆದ ಘಟನೆ ಫೆ 1 ರಂದು ನಡೆದಿದೆ.
ಈ ಅಪಘಾತದಿಂದ ರಸ್ತೆ ದಾಟುತ್ತಿದ್ದ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದ್ದು . ಕೆ ಎಸ್ ಆರ್ ಟಿ ಸಿ ಬಸ್ ಚಾಲಕ ಅಪಘಾತ ನಡೆದ ಕೂಡಲೇ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಸಾರ್ವಜನಿಕರ ಸಹಕಾರದಿಂದ ತಕ್ಷಣ 108 ಆಂಬುಲೆನ್ಸ್ ನಲ್ಲಿ ಗಂಭೀರ ಸ್ಥಿತಿಯಲ್ಲಿರುವ ವ್ಯಕ್ತಿಯನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಈ ಅಪಘಾತದಿಂದ ರಸ್ತೆ ದಾಟುತ್ತಿದ್ದ ವ್ಯಕ್ತಿಯ ಸ್ಥಿತಿ ಚಿಂತಾಜನಕವಾಗಿದ್ದು . ಕೆ ಎಸ್ ಆರ್ ಟಿ ಸಿ ಬಸ್ ಚಾಲಕ ಅಪಘಾತ ನಡೆದ ಕೂಡಲೇ ಸ್ಥಳದಿಂದ ಎಸ್ಕೇಪ್ ಆಗಿದ್ದಾನೆ. ಸಾರ್ವಜನಿಕರ ಸಹಕಾರದಿಂದ ತಕ್ಷಣ 108 ಆಂಬುಲೆನ್ಸ್ ನಲ್ಲಿ ಗಂಭೀರ ಸ್ಥಿತಿಯಲ್ಲಿರುವ ವ್ಯಕ್ತಿಯನ್ನು ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.
ಭೂತೇಶ್ ಪಿ. ಜೆ ಅವರು ಬೆಂಗಳೂರು ಮೂಲದವರಾಗಿದ್ದು ಕುಕ್ಕೆ ಸುಬ್ರಹ್ಮಣ್ಯ ಕ್ಕೆ ತಮ್ಮ ವಾಹನದಲ್ಲಿ ಬಾಡಿಗೆಗೆ ಬಂದಿದ್ದರು. ಕೈಕಂಬದಲ್ಲಿ ವಾಹನ ನಿಲ್ಲಿಸಿ ರಸ್ತೆಯ ಇನ್ನೊಂದು ಬದಿಯ ಅಂಗಡಿಗೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಬಸ್ ಸುಬ್ರಹ್ಮಣ್ಯದಿಂದ ಬೆಂಗಳೂರಿಗೆ ತೆರಳುತ್ತಿತ್ತು. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಆಗಮಿಸಿ ಪರಿಶೀಲಿಸಿ ಮಾಹಿತಿ ಕಲೆ ಹಾಕುತ್ತಿದ್ದಾರೆ.