- Advertisement -
- Advertisement -
ಸುಬ್ರಹ್ಮಣ್ಯ: ಕೊರೋನ ಪಾಸಿಟಿವ್ ಬಂದ ಯುವಕನೋರ್ವನನ್ನು ಪಂಚಾಯತ್ ಸದಸ್ಯರು ಒತ್ತಾಯ ಪೂರ್ವಕವಾಗಿ ಕೋವಿಡ್ ಸೆಂಟರ್ ಗೆ ಸೇರಿಸಿದ್ದರು. ಇದರಿಂದ ಅಸಮಾಧಾನಗೊಂಡ ಯುವಕ ಪಿಡಿಓ ಗೆ ಬೆದರಿಕೆ ಒಡ್ದಿದ್ದು, ಈ ವಿಷಯಕ್ಕೆ ಸಂಬಂಧಿಸಿದಂತೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಯುವಕನೋರ್ವನಿಗೆ ಕೊರೋನ ಪಾಸಿಟಿವ್ ಬಂದಿದ್ದು, ಹೋಂ ಐಸೋಲೇಷನ್ ನಲ್ಲಿರುವ ಸಂದರ್ಭದಲ್ಲಿ ಹೊರಗಡೆ ತಿರುಗಾಡುವುದನ್ನು ಸಾರ್ವಜನಿಕರು ಗಮನಿಸಿ ಪಂಚಾಯತ್ ಗೆ ದೂರು ನೀಡಿದ್ದಾರೆ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಯುವಕನ ಮನೆಗೆ ದೇವಚಳ್ಳ ಪಿಡಿಓ ಗುರುಪ್ರಸಾದ್, ತಾಲೂಕು ಆಡಳಿತ ಅಧಿಕಾರಿಗಳು ಹಾಗೂ ಪೊಲೀಸ್ ಸಹಾಯದೊಂದಿಗೆ ಆತನನ್ನು ಹೋಂ ಐಸೋಲೇಷನಿಂದ ಪಂಜದ ಕೋವಿಡ್ ಸೆಂಟರ್ ಗೆ ಸೇರಿಸಿದ್ದಾರೆ.
ಇದೇ ವಿಚಾರವಾಗಿ ನನ್ನನ್ನು ಒತ್ತಾಯಪೂರ್ವಕವಾಗಿ ಸೇರಿಸಿದ್ದಾರೆಂದು ಯುವಕನು ಪಿಡಿಓ ಗೆ ಬೆದರಿಕೆ ಹಾಕಿದ್ದು ಈ ಬಗ್ಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಬೆದರಿಕೆ ಪ್ರಕರಣ ದಾಖಲಾಗಿದೆ.
- Advertisement -