Thursday, June 18, 2026
spot_imgspot_img
spot_imgspot_img

ಸುಬ್ರಹ್ಮಣ್ಯ- ಸಕಲೇಶಪುರ ರೈಲ್ವೆ ಮಾರ್ಗಕ್ಕೆ ಹೊಸ ಸಿಗ್ನಲಿಂಗ್ ತಂತ್ರಜ್ಞಾನ ಪರಿವರ್ತನೆ

- Advertisement -
- Advertisement -

ಮಂಗಳೂರು: ಸುಬ್ರಹ್ಮಣ್ಯ – ಸಕಲೇಶಪುರ ರೈಲ್ವೆ ಮಾರ್ಗ ಹಾದು ಹೋಗುವ ಘಾಟ್ ಪ್ರದೇಶದಲ್ಲಿ ನೈಋತ್ಯ ರೈಲ್ವೆ ಮೈಸೂರು ವಿಭಾಗ ಸಿಗ್ನಲಿಂಗ್ ತಂತ್ರಜ್ಞಾನವನ್ನು ಸುಧಾರಣೆ ಮಾಡಿದೆ.

 ಕರಾವಳಿಯಿಂದ ಬೆಂಗಳೂರು, ಮೈಸೂರಿಗೆ ಪ್ರಯಾಣಿಕರ ರೈಲುಗಳ ಸಂಖ್ಯೆ ಗಮನಾರ್ಹವಾಗಿ ಏರಿಕೆಯಾಗುವ ಸಾಧ್ಯತೆ ಇದೆ.ಸಿಗ್ನಲಿಂಗ್ ವ್ಯವಸ್ಥೆಯನ್ನು ಇದೇ ಜೂನ್ ತಿಂಗಳಿಂದ ಪರಿವರ್ತನೆ ಹಾಗೂ ತಂತ್ರಜ್ಞಾನ ಉನ್ನತೀಕರಿಸುವ ಕೆಲಸ ಆರಂಭಿಸಲಾಗಿತ್ತು. ಅತ್ಯಾಧುನಿಕ ಮತ್ತು ವಿಶ್ವಾಸಾರ್ಹ ಸಿಗ್ನಲಿಂಗ್ ಹಾಗೂ ಸಂಪರ್ಕ ಉಪಕರಣಗಳನ್ನು ಕಡಗರವಳ್ಳಿ ಹಾಗೂ ಯಡಕುಮೇರು ಸ್ಟೇಷನ್‌ಗಳಲ್ಲಿ ಅಳವಡಿಸಲಾಗಿದೆ.

ಕೊರೊನಾ ಸೋಂಕಿನ ಭಯ ಹಾಗೂ ಭಾರಿ ಮಳೆಯ ಮಧ್ಯೆ ಕಾಮಗಾರಿ ಮುಗಿಸುವುದು ಕಠಿಣ ಕೆಲಸವಾಗಿತ್ತು. ಘಾಟ್ ಪ್ರದೇಶದಲ್ಲಿ ಕಾರ್ಮಿಕರನ್ನು ಸಾಗಿಸುವುದು, ಕೇಬಲ್, ಲೊಕೇಶನ್ ಬಾಕ್ಸ್, ಎಂಎಸ್‌ಡಿಎಸಿ ಉಪಕರಣ ಸಾಗಾಟ, ಭೂಕುಸಿತದ ಭಯ, ವಿದ್ಯುತ್‌ಗೆ ಡೀಸೆಲ್ ಜನರೇಟರ್ ಅವಲಂಬನೆ ಇವೆಲ್ಲದರ ನಡುವೆಯೂ 4.4 ಕೋಟಿ ರೂ. ವೆಚ್ಚದಲ್ಲಿ ಈ ಕೆಲಸ ಪೂರ್ಣಗೊಳಿಸಲಾಗಿದೆ.

 ಈ ವೆಚ್ಚವನ್ನು ಹಾಸನ-ಮಂಗಳೂರು ರೈಲು ಅಭಿವೃದ್ಧಿ ಕಂಪನಿಯವರು ಭರಿಸಿದ್ದಾರೆ. ಈ ಸೌಲಭ್ಯಗಳಿಂದಾಗಿ ಹೆಚ್ಚುವರಿಯಾಗಿ ಶೇ.35ರಷ್ಟು ರೈಲು ಓಡಿಸಬಹುದಾಗಿದೆ. ಸರಕು ಸಾಗಾಟ ರೈಲುಗಳ ವೆಚ್ಚ ಕಡಿಮೆಗೊಳಿಸಲೂ ನೆರವಾಗಲಿದೆ. ಹೊಸ ತಂತ್ರಜ್ಞಾನವು ಘಾಟ್‌ನ ದುರ್ಗಮ ಪ್ರದೇಶದಲ್ಲಿರುವ ಟ್ರಾೃಕ್ ಸರ್ಕ್ಯೂಟ್‌ಗಳ ನಿರ್ವಹಣೆಯನ್ನು ಸುಗಮಗೊಳಿಸುತ್ತದೆ ಎಂದು ನೈಋತ್ಯ ರೈಲ್ವೆ ಹಿರಿಯ ವಿಭಾಗೀಯ ಸಿಗ್ನಲ್ ಮತ್ತು ಟೆಲಿಕಮ್ಯುನಿಕೇಶನ್ ಇಂಜಿನಿಯರ್ ಡಿ.ಶ್ರೀನಿವಾಸುಲು ತಿಳಿಸಿದ್ದಾರೆ.

- Advertisement -

Related news

error: Content is protected !!