Saturday, June 28, 2025
spot_imgspot_img
spot_imgspot_img

ಮಾಣಿ ಗ್ರಾಮ ಪಂಚಾಯತ್‌ ಅಧ್ಯಕ್ಷರಾಗಿ ಸುದೀಪ್‌ ಕುಮಾರ್‌ ಶೆಟ್ಟಿ ಆಯ್ಕೆ

- Advertisement -
- Advertisement -

ಮಾಣಿ ಗ್ರಾಮ ಪಂಚಾಯತ್‌ ಅಧ್ಯಕ್ಷರಾಗಿ ಕಾಂಗ್ರೇಸ್‌ ಬೆಂಬಲಿತ ಅಭ್ಯರ್ಥಿ ಸುದೀಪ್‌ ಕುಮಾರ್‌ ಶೆಟ್ಟಿ ಆಯ್ಕೆಯಾಗಿದ್ದಾರೆ.

ಮಾಣಿ ಗ್ರಾಮ ಪಂಚಾಯತ್‌ನಲ್ಲಿ 8 ಕಾಂಗ್ರೇಸ್‌ ಬೆಂಬಲಿತ ಹಾಗೂ 2 ಬಿಜೆಪಿ ಬೆಂಬಲಿತ ಸದಸ್ಯರು ಕಾರ್ಯನಿರ್ವಹಿಸುತ್ತಿದ್ದಾರೆ. ಈ ಪೈಕಿ ಕಾಂಗ್ರೇಸ್‌ ಬೆಂಬಲಿತ ಅಭ್ಯರ್ಥಿ ಸುದೀಪ್‌ ಕುಮಾರ್‌ ಶೆಟ್ಟಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಸುದೀಪ್‌ ಕುಮಾರ್‌ ಶೆಟ್ಟಿ ಪಾಣೆಮಂಗಳೂರು ಬ್ಲಾಕ್‌ ಕಾಂಗ್ರೇಸ್‌ನ ಮಾಜಿ ಅಧ್ಯಕ್ಷರಾಗಿ ಹಾಗೂ ಮಾಣಿ ಯುವಕ ಮಂಡಲದ ಅಧ್ಯಕ್ಷರಾಗಿ ಹಲವಾರು ಜವಬ್ದಾರಿಗಳನ್ನು ನಿಭಾಯಿಸಿದವರು. ಇನ್ನು ಮುಂದಿನ ಒಂದುವರೆ ವರ್ಷದ ಅವಧಿಗೆ ಮಾಣಿ ಗ್ರಾಮ ಪಂಚಾಯತ್‌ನಲ್ಲಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಲಿದ್ದಾರೆ.

ಮಾಣಿ ಗ್ರಾಮ ಪಂಚಾಯತ್‌ನ ನೂತನ ಅಧ್ಯಕ್ಷರಾಗಿ ಧಾರ್ಮಿಕ ಸಾಮಾಜಿಕ ಮುಂದಾಳು ಸುದೀಪ್ ಕುಮಾರ್ ಶೆಟ್ಟಿಯವರು ಅಧಿಕಾರ ವಹಿಸಿಕೊಂಡರು. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್‌ನ ಅಧ್ಯಕ್ಷರಾಗಿ, ಮಾಣಿ ಯುವಕ ಮಂಡಲದ ಅಧ್ಯಕ್ಷರಾಗಿ, ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುತ್ತಾರೆ.

ಉಪಾಧ್ಯಕ್ಷರಾಗಿ ಸುಜಾತ ಪೂಜಾರಿಯವರು ಮುಂದುವರಿಯಲಿದ್ದಾರೆ. ಚುನಾವಣಾಧಿಕಾರಿಯಾಗಿ ಬಂಟ್ವಾಳ ಪ್ರಭಾರ ತಹಶೀಲ್ದಾರ್ ಅರವಿಂದ್ ಕೆ.ಎಮ್ ರವರು ಕಾರ್ಯ ನಿರ್ವಹಿಸಿದರು. ಉಪ ತಹಶೀಲ್ದಾರ್ ನವೀನ್ ಕುಮಾರ್ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಗಿರಿಜಾ ತಾಲೂಕು ಪಂಚಾಯತ್ತಿನ ಮಂಜುನಾಥ್ ಮತ್ತು ಪಂಚಾಯತ್ ಸಿಬ್ಬಂದಿ ಸಹಕರಿಸಿದರು.

ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಚಂದ್ರಪ್ರಕಾಶ್ ಶೆಟ್ಟಿ ತುಂಬೆ, ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ ಭಂಡಾರಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಜಯಂತಿ ಪೂಜಾರಿ, ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ನಿಕಟಪೂರ್ವಾಧ್ಯಕ್ಷ ಇಬ್ರಾಹಿಂ.ಕೆ.ಮಾಣಿ, ಸದಸ್ಯರಾದ ಮೆಲ್ವಿನ್ ಕಿಶೋರ್ ಮಾರ್ಟಿಸ್, ರಮಣಿ.ಡಿ.ಪೂಜಾರಿ, ಪ್ರೀತಿ ಡಿನ್ನಾ ಪಿರೇರಾ, ಸೀತಾ ಮತ್ತಿತರರು ಉಪಸ್ಥಿತರಿದ್ದು ನೂತನ ಅಧ್ಯಕ್ಷರಿಗೆ ಅಭಿನಂದನೆ ಸಲ್ಲಿಸಿದರು.


- Advertisement -

Related news

error: Content is protected !!