Sunday, June 29, 2025
spot_imgspot_img
spot_imgspot_img

ಬೆಂಗಳೂರು: ತಂಗಿಯ ಮುಂದೆಯೇ ನೇಣು ಬಿಗಿದುಕೊಂಡು ಬಾಲಕ ಆತ್ಮಹತ್ಯೆ.!

- Advertisement -
- Advertisement -

ಬೆಂಗಳೂರು : ಬೆಂಗಳೂರಿನಲ್ಲಿ ಘೋರ ಘಟನೆಯೊಂದು ನಡೆದಿದ್ದು, ತಂಗಿಯೇ ಮುಂದೆಯೇ ಉಡದಾರರಿಂದ ನೇಣು ಬಿಗಿದುಕೊಂಡು 13 ವರ್ಷದ ಬಾಲಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ಧ್ರುವ (13) ಎಂಬ ಬಾಲಕ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

9 ವರ್ಷದ ತಂಗಿಯ ಮುಂದೆಯೇ ಉಡದಾರದಿಂದ ನೆಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.ಬಾಲಕನ ತಂದೆ ಬೇಕರಿಯಲ್ಲಿ ಕೆಲಸ ಮಾಡುತ್ತಿದ್ದು, ತಾಯಿ ಗಾರ್ಮೆಂಟ್ಸ್ ನಲ್ಲಿ ಕೆಲಸ ಮಾಡುತ್ತಿದ್ದರು. ಬಾಲಕ ಉಡುದಾರದಿಂದ ನೇಣು ಹಾಕಿಕೊಂಡಿದ್ದು, ಈ ವೇಳೆ ಅದು ತುಂಡಾಗಿ ಕೆಳಗೆ ಬಿದ್ದಿದ್ದಾನೆ. ವಿಷಯ ತಿಳಿದ ಪೋಷಕರು ಕೂಡಲೇ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲು ಮುಂದಾಗಿದ್ದಾರೆ. ಆದರೆ ಅಷ್ಟರಲ್ಲೇ ಬಾಲಕ ಮೃತಪಟ್ಟಿದ್ದಾನೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿದ್ದು, ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!