Sunday, June 21, 2026
spot_imgspot_img
spot_imgspot_img

ಸಹಪಾಠಿಗಳಿಂದ ರ‍್ಯಾಗಿಂಗ್‌; ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ

- Advertisement -
- Advertisement -

ಬಾಗಲಕೋಟೆ: ಸಹಪಾಠಿಗಳ ರ‍್ಯಾಗಿಂಗ್‌ಗೆ ಮನನೊಂದು ಬಿಎ ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು ಗುಳೇದಗುಡ್ಡ ಪಟ್ಟಣದ ಖಾಸಗಿ ಕಾಲೇಜಿನ ಬಿಎ ಅಂತಿಮ ವರ್ಷದ ವಿದ್ಯಾರ್ಥಿನಿ ಅಂಜಲಿ ಮುಂಡಾಸ (21) ಎಂದು ಗುರುತಿಸಲಾಗಿದೆ.

ಶುಕ್ರವಾರ ಕಾಲೇಜಿನಲ್ಲಿ ಸಹಪಾಠಿಗಳಾದ ವರ್ಷಾ ಹಾಗೂ ಪ್ರದೀಪ್ ಸೇರಿ ಮೂವರು ಅಂಜಲಿಗೆ ರ‍್ಯಾಗಿಂಗ್ ಮಾಡಿದ್ದರು. ಇದರಿಂದ ಮಾನಸಿಕ ಕಿರುಕುಳ ಅನುಭವಿಸಿದ್ದ ಅಂಜಲಿ, ಡೆತ್‌ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾಳೆ.

ನನ್ನ ಸಾವಿಗೆ ಕಾರಣ ಈ ಮೂವರು ವ್ಯಕ್ತಿಗಳು. ನನ್ನ ಬದುಕಿನಲ್ಲಿ ಅವರು ಪರಿಣಾಮವನ್ನು ಬೀರಿದ್ದಾರೆ. ಅವರುಗಳೆಂದರೆ ವರ್ಷಾ, ಪ್ರದೀಪ್ ಮತ್ತು ಇನ್ನಿತರ ಸ್ನೇಹಿತರು. ನನ್ನ ಬಗ್ಗೆಯೇ ಮಾತನಾಡಿ ನನ್ನನ್ನು ಮಾನಸಿಕವಾಗಿ ಕುಗ್ಗಿಸಿದ್ದಾರೆ. ಅವರು ನನ್ನ ಬದುಕಿನ ಮಾರಕ ವ್ಯಕ್ತಿಗಳಾಗಿರುತ್ತಾರೆ. ಇವರನ್ನು ಸುಮ್ಮನೆ ಬಿಡಬಾರದು. ಸೇಯಿಂಗ್ ಗುಡ್ ಬೈ ಎಂದು ಸಹಿ ಹಾಕಿ ಅಂಜಲಿ ಡೆತ್‌ನೋಟ್ ಬರೆದಿದ್ದಾಳೆ. ಈ ಬಗ್ಗೆ ಗುಳೇದಗುಡ್ಡ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್ ದಾಖಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.

- Advertisement -

Related news

error: Content is protected !!