Sunday, July 26, 2026
spot_imgspot_img
spot_imgspot_img

ಸುಳ್ಯ: ಇಂಜಿನಿಯರಿಂಗ್ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

- Advertisement -
- Advertisement -

ಇಂಜಿನಿಯರಿಂಗ್ ಕಲಿಯುತ್ತಿರುವ ವಿದ್ಯಾರ್ಥಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.ಸುಳ್ಯ ಜಟ್ಟಿಪಳ್ಳದ ಕಾನತ್ತಿಲ ಬಳಿಯ ಬಾಡಿಗೆ ಮನೆಯೊಂದರಲ್ಲಿದ್ದ ದುಗಲಡ್ಕ ಕೇಶವ ಪೂಜಾರಿ ಎಂಬವರ ಪುತ್ರ ಇಂಜಿನಿಯರಿಂಗ್ ವಿದ್ಯಾರ್ಥಿ ವೀಕ್ಷಿತ್ (19 ವರ್ಷ) ಮನೆಯಲ್ಲಿ ಯಾರು ಇಲ್ಲದ ಸಂದರ್ಭ ಪಕ್ಕಾಸಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇಂದು ಇಂಜಿನಿಯರಿಂಗ್ ಕಾಲೇಜಿನಲ್ಲಿ ಕ್ಲಾಸ್ ಟೆಸ್ಟ್ ಇದ್ದು ಅದನ್ನು ಅಟೆಂಡ್ ಆಗಿದ್ದ ವೀಕ್ಷಿತ್, ಎಂದಿನಂತೆ ಸಂಜೆ ತನ್ನ ತಾಯಿಯನ್ನು ಅವರು ಕೆಲಸ ಮಾಡುವಲ್ಲಿಂದ ಮನೆಗೆ ಕರೆದುಕೊಂಡು ಬರಲು ಬರದೆ ಇದ್ದುದಲ್ಲದೆ, ಫೋನ್ ಕೂಡ ಸ್ವೀಕರಿಸದಿದ್ದುದನ್ನು ಕಂಡು ತಾಯಿ ಪದ್ಮನಿಯವರು ಪಕ್ಕದ ಮನೆಯವರಿಗೆ ಫೋನ್ ಮಾಡಿ ರೂಮಿನಲ್ಲಿ ವೀಕ್ಷಿತ್ ಇದ್ದಾನೋ ಇಲ್ಲವೋ ಎಂದು ನೋಡಲು ಹೇಳಿದರೆಂದೂ ಪಕ್ಕದ ರೂಮಿನವರು ಬಂದು ನೋಡುವಾಗ ವೀಕ್ಷಿತ್ ಆತ್ಮಹತ್ಯೆ ಕೊಂಡಿರುವುದು ಕಂಡುಬಂತೆಂದೂ ತಿಳಿದುಬಂದಿದೆ.

- Advertisement -

Related news

error: Content is protected !!