Sunday, July 19, 2026
spot_imgspot_img
spot_imgspot_img

ಕಾನ್‌ಸ್ಟೇಬಲ್ ಪತ್ನಿ ನೇಣು ಬಿಗಿದು ಆತ್ಮಹತ್ಯೆ..!

- Advertisement -
- Advertisement -

ಬೆಂಗಳೂರು: ಪೊಲೀಸ್ ಕ್ವಾರ್ಟಸ್‌ನಲ್ಲೇ ನೇಣುಬಿಗಿದುಕೊಂಡು ಕಾನ್‌ಸ್ಪೇಬಲ್ ಪತ್ನಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕೆ.ಆರ್.ಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಲಕ್ಷ್ಮೀ ಪ್ರಿಯಾ(26) ಆತ್ಮಹತ್ಯೆಗೆ ಶರಣಾದ ಮಹಿಳೆ. ಮೃತಳ ತಂದೆ ಕುಮಾರ್ ಆರಾಧ್ಯ ಅವರು ನೀಡಿದ ದೂರಿನ ಮೇರೆಗೆ ಹೆಚ್‌ಎಎಲ್ ಠಾಣೆಯ ಕಾನ್‌ಸ್ಟೇಬಲ್ ರಾಜೇಶ್ ಹಾಗೂ ತಂದೆ-ತಾಯಿ ಸೇರಿದಂತೆ ನಾಲ್ವರ ವಿರುದ್ಧ ವರದಕ್ಷಿಣೆ ಪ್ರಕರಣ ದಾಖಲಿಸಲಾಗಿದೆ.

ಮೈಸೂರು ಮೂಲದ ಲಕ್ಷ್ಮೀ ಪ್ರಿಯಾಗೆ 2023ರಲ್ಲಿ ಕಾನ್‌ಸ್ಟೇಬಲ್ ಜೊತೆ ಮದುವೆಯಾಗಿತ್ತು. ಈ ವೇಳೆ 350 ಗ್ರಾಂ ಚಿನ್ನ, 1 ಕೆ.ಜಿ.ಬೆಳ್ಳಿ ಹಾಗೂ ಗೃಹ ಬಳಕೆ ವಸ್ತುಗಳು ನೀಡಲಾಗಿತ್ತು. ದಂಪತಿಗೆ 8 ತಿಂಗಳ ಹೆಣ್ಣು ಮಗುವಿದೆ. ಮದುವೆಯಾದ ಕೆಲ ತಿಂಗಳ ಬಳಿಕ ವರದಕ್ಷಿಣೆ ಹಣಕ್ಕಾಗಿ ಪತಿ ಪೀಡಿಸುತ್ತಿದ್ದ. ಬಾಣಂತನಕ್ಕಾಗಿ ತವರು ಮನೆಗೆ ಬಂದಾಗಲೂ ಮಾನಸಿಕ ಬೆಂಬಲ ಹಾಗೂ ಆರೈಕೆ ಮಾಡದೇ ಕಿರುಕುಳ ನೀಡಿದ್ದನು ಎನ್ನಲಾಗಿದೆ.

ಮೇ 22ರಂದು ಲಕ್ಷ್ಮೀ ಪ್ರಿಯಾ ವಾಟ್ಸಾಪ್‌ನಲ್ಲಿ ಮೊಬೈಲ್ ಪಾಸ್‌ವರ್ಡ್ ಕಳುಹಿಸಿ, ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಸಂಬಂಧ ರಾಜೇಶ್ ಹಾಗೂ ಆತನ ಮನೆಯವರ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಮೃತಳ ತಂದೆ ತಿಳಿಸಿದ್ದಾರೆ.

ವರದಕ್ಷಿಣೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿರುವ ಪೊಲೀಸರು, ರಾಜೇಶ್‌ನನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಮೇಲ್ನೋಟಕ್ಕೆ ವರದಕ್ಷಿಣೆ ಕಿರುಕುಳ ಹಾಗೂ ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರುವುದು ತಿಳಿದುಬಂದಿದ್ದು, ತನಿಖೆ ಮುಂದುವರೆದಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

- Advertisement -

Related news

error: Content is protected !!