Sunday, June 29, 2025
spot_imgspot_img
spot_imgspot_img

ಮಂಗಳೂರು: ಪತ್ನಿ, ಮಗುವನ್ನು ಕೊಂದು ನಂತರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾದ ಪತಿ

- Advertisement -
- Advertisement -

ಮಂಗಳೂರು : ಪತ್ನಿ ಮತ್ತು ಮಗನನ್ನು ಚೂರಿಯಿಂದ ಇರಿದು ಕೊಂದು ನಂತರ ರೈಲಿಗೆ ತಲೆಕೊಟ್ಟು ಪತಿ ಆತ್ಮಹತ್ಯೆ ಮಾಡಿಕೊಂಡಿರುವಂತಹ ಘಟನೆ ಮುಲ್ಕಿ ತಾಲೂಕಿನ ಪಕ್ಷಿಕೆರೆ ಗ್ರಾಮದಲ್ಲಿ ನಡೆದಿದೆ.

ಪತ್ನಿ ಪ್ರಿಯಾಂಕಾ(28), ಪುತ್ರ ಹೃದಯ್(4) ಕೊಲೆ ಮಾಡಿ ಕಾರ್ತಿಕ್ ಭಟ್(32) ಕೂಡ ಆತ್ಮಹತ್ಯೆಗೆ ಶರಣಾಗಿದ್ದಾರೆ. ಕೌಟುಂಬಿಕ ಸಮಸ್ಯೆಯಿಂದ ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮುಲ್ಕಿ ಠಾಣಾ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಆರೋಪಿ ಕಾರ್ತಿಕ್ ಪಕ್ಷಿಕೆರೆಯಲ್ಲಿರುವ ತನ್ನ ಮನೆಯಲ್ಲಿ ಪತ್ನಿ ಮತ್ತು ಮಗುವನ್ನು ಹತ್ಯೆಗೈದು ಮುಲ್ಕಿಯ ಬೆಳಾಯರುನಲ್ಲಿ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಸೊಸೆ ಮತ್ತು ಮೊಮ್ಮಗನ ಮೃತದೇಹ ಮನೆಯಲ್ಲಿದ್ದರೂ ವೃದ್ಧ ಅತ್ತೆ ಮಾವನಿಗೆ ಗೊತ್ತೆ ಆಗಿಲ್ಲ. ಕಾರ್ತಿಕ್ ಪತ್ನಿಗೆ ತನ್ನ ಮಾವ ಅತ್ತೆಯೊಂದಿಗೆ ಮನಸ್ತಾಪವಿದ್ದ ಮಾಹಿತಿ ಇದೆ. ಮನೆಯ ಕೋಣೆಯಲ್ಲಿ ಮತೃ ಕಾರ್ತಿಕ್ ಕುಟುಂಬ ಪ್ರತ್ಯೇಕವಾಗಿದ್ದು, ಇಡೀ ದಿನ ಮನೆಯ ಕೋಣೆಯಲ್ಲೇ ಇರುತ್ತಿದ್ದರು ಎನ್ನಲಾಗಿದೆ.

- Advertisement -

Related news

error: Content is protected !!