Saturday, June 28, 2025
spot_imgspot_img
spot_imgspot_img

ಮಂಗಳೂರು : ಮಗುವಿನೊಂದಿಗೆ ಸೇತುವೆ ಮೇಲೇರಿ ಆತ್ಮಹತ್ಯೆಗೆ ಯತ್ನಿಸಿದ ವ್ಯಕ್ತಿ: ಸ್ಥಳೀಯರಿಂದ ರಕ್ಷಣೆ!

- Advertisement -
- Advertisement -

ಗುರುಪುರ ಬಳಿ ಪುಟ್ಟ ಮಗುವನ್ನು ಹಿಡಿದುಕೊಂಡಿದ್ದ ವ್ಯಕ್ತಿಯೊಬ್ಬ ಸೇತುವೆಯಿಂದ ಹಾರಲು ಯತ್ನಿಸಿದ ಘಟನೆ ಗುರುಪುರದಲ್ಲಿ ನಡೆದಿದೆ.

ಕಂದಾವರ ಪಡ್ಡಾಯಿ ಪದವಿನ ಸಂದೀಪ್(34) ಎಂಬಾತ 2 ವರ್ಷದ ಮಗುವನ್ನು ಹಿಡಿದುಕೊಂಡು ಸೇತುವೆ ಮೇಲೆ ನಿಂತು ಆತ್ಮಹತ್ಯೆ ಮಾಡಿಕೊಳ್ಳುವುದಾಗಿ ಹೇಳಿಕೊಳ್ಳುತ್ತಿದ್ದ. ಈ ವೇಳೆ ಸ್ಥಳೀಯ ಕೆಳಗೆ ಹಾರಬೇಡ ಎಂದು ಒತ್ತಾಯಿಸಿದ್ದಾರೆ. ಆತ ಯಾರೂ ಹತ್ತಿರ ಬರಬೇಡಿ ಎಂದು ಕೂಗಿ ಕೊಂಡಿದ್ದಾರೆ. ಕೊನೆಗೂ ಸ್ಥಳೀಯರು ಆತನನ್ನು ಹಿಡಿದು ತಂದೆ ಮಗುವನ್ನು ರಕ್ಷಿಸಿದ್ದು, ವ್ಯಕ್ತಿಯನ್ನು ಪೊಲೀಸರಿಗೆ ಒಪ್ಪಿಸಿದ್ದಾರೆ. ಪೊಲೀಸರು ಸಂದೀಪ್ ಬಳಿ ವಿಚಾರಿಸಿದಾಗ ತಾನು ಮಗುವಿಗೆ ಹೊಳೆ ತೋರಿಸುವ ಉದ್ದೇಶದಿಂದ ಸೇತುವೆಯ ಮೇಲೇರಿರುವುದಾಗಿ ತಿಳಿಸಿದ್ದು, ಪೊಲೀಸರು ಆತನಿಗೆ ಬುದ್ಧಿ ಹೇಳಿ ಮನೆಗೆ ಕಳುಹಿಸಿಕೊಟ್ಟಿದ್ದಾರೆನ್ನಲಾಗಿದೆ.

ಕೌಟುಂಬಿಕ ಕಲಹದ ಹಿನ್ನೆಲೆ ವ್ಯಕ್ತಿ ಆತ್ಮಹತ್ಯೆಗೆ ಯತ್ನಿಸಿದ್ದಾನೆಂದು ಪ್ರಾಥಮಿಕ ತನಿಖೆಯಲ್ಲಿ ತಿಳಿದಿದೆ. ಸ್ಥಳಕ್ಕೆ ಬಜ್ಪೆ ಪೊಲೀಸರು ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!