Sunday, June 29, 2025
spot_imgspot_img
spot_imgspot_img

ವರದಕ್ಷಿಣೆ ಕಿರುಕುಳ ಆರೋಪ : ಕುಂದಾಪುರ ಮೂಲದ ಮಹಿಳೆ ಆತ್ಮಹತ್ಯೆ

- Advertisement -
- Advertisement -

ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತ ಮಹಿಳೆಯೊಬ್ಬರು ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವಿವೇಕನಗರ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಉಡುಪಿ ಜಿಲ್ಲೆಯ ಕುಂದಾಪುರದ ಮೇಘನಾ ಶೆಟ್ಟಿ (27) ಮೃತ ಮಹಿಳೆ.

ಮೇಘನಾ ಅವರು ಸಾಫ್ಟ್‌ವೇರ್ ಎಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದು. ಎರಡು ವರ್ಷಗಳ ಹಿಂದೆ ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲ್ಲೂಕಿನ ಹಣಗೆರೆ ಗ್ರಾಮದ ಕಲ್ಲುಕೊಪ್ಪ ಗ್ರಾಮದ ಸುದೀಪ್ ಶೆಟ್ಟಿ (30) ಅವರೊಂದಿಗೆ ವಿವಾಹ ಆಗಿತ್ತು. ದಂಪತಿಗೆ ಒಂದು ವರ್ಷದ ಹೆಣ್ಣು ಮಗುವಿದೆ ಎಂದು ತಿಳಿದುಬಂದಿದೆ.

‘ದಂಪತಿಗಳಿಬ್ಬರೂ ಸಾಫ್ಟ್‌ವೇರ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ದಂಪತಿ ಈಜಿಪುರದ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಮೇಘನಾ ಶೆಟ್ಟಿ ಪೋಷಕರು ಕೂಡ ಈಜಿಪುರದಲ್ಲಿ ವಾಸವಾಗಿದ್ದು, ದಂಪತಿ ನಡುವೆ ಕೆಲವು ತಿಂಗಳಿಂದ ಕೌಟುಂಬಿಕ ವಿಚಾರವಾಗಿ ಜಗಳ ನಡೆಯುತ್ತಿತ್ತು. ಪತಿ ಸುದೀಪ್, ಮೇಘನಾ ಶೆಟ್ಟಿ ಅವರಿಗೆ ಸಂಬಳವನ್ನು ತನಗೆ ಕೊಡುವಂತೆ ಪೀಡಿಸುತ್ತಿದ್ದರು. ಕಾರು ಹಾಗೂ ಇತರೆ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಒತ್ತಾಯಿಸುತ್ತಿದ್ದರು. ಆದರೆ, ಮೇಘನಾ ನಿರಾಕರಿಸಿದ್ದರು ಎನ್ನಲಾಗಿದೆ.

ಪತಿಯ ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಮೇಘನಾ ಅವರ ಪೋಷಕರು ದೂರು ನೀಡಿದ್ದು ವಿವೇಕನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಪತಿ ಸುದೀಪ್ ಶೆಟ್ಟಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಹೇಳಿದರು.

- Advertisement -

Related news

error: Content is protected !!