- Advertisement -
- Advertisement -
ವಿಟ್ಲ: ಕೃಷಿಕರೊಬ್ಬರು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲದ ಬಸವಲಚ್ಚಿಲ್ ಎಂಬಲ್ಲಿ ನಡೆದಿದೆ.
ವಿಟ್ಲದ ಬಸವಲಚ್ಚಿಲ್ ಲಕ್ಮಣ ಗೌಡ(50) ಆತ್ಮಹತ್ಯೆ ಮಾಡಿಕೊಂಡವರು.ಅವರು ಎಂದಿನಂತೆ ಕೃಷಿ ಕೆಲಸ ಮಾಡಿಕೊಂಡಿದ್ದು ಉಬ್ಬಸ ರೋಗದಿಂದ ಬಳಲುತ್ತಿದ್ದರು. ಶುಕ್ರವಾರ ತೋಟದಿಂದ ಬಂದವರು ಅಸ್ವಸ್ಥರಾದವರಂತೆ ವರ್ತಿಸುತ್ತಿರುವ ಬಗ್ಗೆ ಗಮನಿಸಿದ ಮನೆಯವರು ಅವರನ್ನು ಪರಿಶೀಲಿಸಿದಾಗ ಅವರ ಪ್ಯಾಂಟ್ ಕಿಸೆಯಲ್ಲಿ ಯಾವುದೋ ವಿಷ ಪದಾರ್ಥ ಇದ್ದುದನ್ನು ಗಮನಿಸಿ ಕೂಡಲೇ ಅವರನ್ನು ಪುತ್ತೂರಿನ ಮಹಾವೀರ ಆಸ್ಪತ್ರೆಗೆ ಚಿಕಿತ್ಸೆ ಗೆ ದಾಖಲಿಸಿದ್ದು , ಸಂಜೆ 4 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.ವಿಷ ಪದಾರ್ಥ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -