- Advertisement -
- Advertisement -
ಸುಳ್ಯ: ಸ್ಕೂಟರ್ ಮತ್ತು ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಗೂನಡ್ಕ ಸಮೀಪ ನಡೆದಿದೆ.
ಮೃತಪಟ್ಟ ಸ್ಕೂಟರ್ ಸವಾರನನ್ನು ಮುತ್ತೂಟ್ ಫೈನಾನ್ಸ್ ಸಂಸ್ಥೆಯ ಉದ್ಯೋಗಿ ಸುಳ್ಯದ ಕುಕ್ಕುಜಡ್ಕ ಮೂಲದ ನವೀನ್(30) ಎಂದು ಹೇಳಲಾಗಿದೆ
ಸ್ಕೂಟರ್ ಸವಾರ ಕಲ್ಲುಗುಂಡಿಯಿಂದ ಸುಳ್ಯಕ್ಕೆ ಹೋಗುತ್ತಿದ್ದಾಗ ದುರಂತ ಸಂಭವಿಸಿದೆ. ಕಾರು ಅತೀ ವೇಗದಲ್ಲಿ ಬಂದು ರಾಂಗ್ ಸೈಡ್ ನಿಂದ ಬಂದು ಗುದ್ದಿದೆ ಎಂದು ತಿಳಿದು ಬಂದಿದೆ. ಕಾರು ಮಂಡ್ಯ ಮೂಲದ್ದಾಗಿದ್ದು ಮಡಿಕೇರಿಯಿಂದ ಮಂಗಳೂರು ಕಡೆಗೆ ಪ್ರಯಾಣಿಸುತ್ತಿತ್ತು.
- Advertisement -