Saturday, May 4, 2024
spot_imgspot_img
spot_imgspot_img

ಸುಳ್ಯ: ಯುವತಿಯನ್ನು ಕೊಂದು ಗೋಣಿಚೀಲದಲ್ಲಿ ತುಂಬಿಸಿಟ್ಟ ಭೂಪ..! ಮನೆಬಿಟ್ಟು ಹೋದ ಪತಿರಾಯನ ಮೇಲೆ ಹೆಚ್ಚಿದ ಅನುಮಾನ..!

- Advertisement -G L Acharya panikkar
- Advertisement -

ಸುಳ್ಯ: ಯುವತಿಯೋರ್ವಳ ಶವ ಗೋಣಿಚೀಲದಲ್ಲಿ ಪತ್ತೆಯಾಗಿದ್ದು ಮತ್ತೆ ಜನರನ್ನು ಆತಂಕಕ್ಕೆ ಈಡುಮಾಡಿದೆ. ಬಾಡಿಗೆ ಮನೆಯಲ್ಲಿ ವಾಸವಿದ್ದ ವಿವಾಹಿತ ಮಹಿಳೆಯನ್ನು ಗಂಡನೇ ಕೊಂದಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ. ಸುಳ್ಯದ ಬೀರಮಂಗಲದ ಬಾಡಿಗೆ ಮನೆಯೊಂದರಲ್ಲಿ ಯುವತಿಯ ಮೃತದೇಹ ಪತ್ತೆಯಾಗಿದೆ.

ಸುಳ್ಯದ ಹೊಟೇಲ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ ಇಮ್ರಾನ್ ಎಂಬಾತ ತನ್ನ ಪತ್ನಿಯನ್ನು ಕೊಂದು ಗೋಣಿಚೀಲದಲ್ಲಿ ತುಂಬಿಸಿ ಪರಾರಿಯಾಗಿರುವುದಾಗಿ ಹೇಳಲಾಗಿದೆ.

ಇಮ್ರಾನ್ ಹಾಗೂ ಆತನ ಪತ್ನಿ ಕಳೆದ ಆರು ತಿಂಗಳಿನಿಂದ ಬೀರಮಂಗಲ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ. ಎರಡು ದಿನಗಳ ಹಿಂದೆ ಊರಿಗೆ ತೆರಳುತ್ತೇನೆ ಎಂದು ಹೊಟೇಲ್‌ನವರಲ್ಲಿ ಹೇಳಿ ಊರಿಗೆ ತೆರಳಿದ್ದಾನೆ,

ಪತ್ನಿಯನ್ನು ಕರೆದುಕೊಂಡು ಹೋಗದ ಇಮ್ರಾನ್; ಪಕ್ಕದ ರೂಂನವರಿಗೆ ಕಾದಿತ್ತು ಶಾಕಿಂಗ್‌..!
ಇಂದು ಪಕ್ಕದ ರೂಂ ನವರಿಗೆ ಸಂಶಯ ಮೂಡಿದೆ. ಇಮ್ರಾನ್‌ ಹೋಗುವಾಗ ಅವನ ಪತ್ನಿಯನ್ನು ಕರೆದುಕೊಂಡು ಹೋಗಿರಲಿಲ್ಲ. ಮೂನ್ನೆ ಮನೆಯಲ್ಲಿ ಕಿರುಚುವ ಶಬ್ದ ಕೇಳಿದೆ ಎಂದು ಅವರು ಸ್ನೇಹಿತರೊಬ್ಬರಿಗೆ ತಿಳಿಸಿದ್ದಾರೆ. ವಿಷಯ ತಿಳಿಸಿ ಪೊಲೀಸರು ಇಂದು ಸಂಜೆ ಬಾಡಿಗೆ ಮನೆಗೆ ಬಂದು ಬಾಗಿಲು ಒಡೆದು ಪರಿಶೀಲಿಸುವಾಗ ಮನೆಯೊಳಗೆ ಗೋಣಿ ಚೀಲದಲ್ಲಿ ಮಹಿಳೆಯ ಮೃತದೇಹ ಪತ್ತೆಯಾಗಿದೆ.

ಸಂಶಯಿತ ಅರೋಪಿ ಪರಾರಿಯಾಗಿದ್ದಾನೆ. ಸುಳ್ಯ ಪೋಲಿಸರು ಸ್ಥಳಕ್ಕೆ ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ಫಿಂಗರ್ ಪ್ರಿಂಟ್ ತಜ್ಞರು ಮತ್ತು ಫೋರೆನ್ಸಿಕ್ ತಜ್ಞರು ಸ್ಥಳಕ್ಕೆ ಬರಲಿದ್ದಾರೆಂದು ತಿಳಿದುಬಂದಿದೆ.

- Advertisement -

Related news

error: Content is protected !!