Sunday, June 29, 2025
spot_imgspot_img
spot_imgspot_img

ಸುಳ್ಯ: ತಾಯಿ ಮಗು ಇಬ್ಬರೂ ಕೆರೆಗೆ ಬಿದ್ದು ದಾರುಣ ಸಾವು

- Advertisement -
- Advertisement -

ಸುಳ್ಯ: ಮಗು ಮತ್ತು ತಾಯಿ ಕೆರೆಗೆ ಬಿದ್ದು ಮೃತಪಟ್ಟ ದಾರುಣ ಘಟನೆಯೊಂದು ಸುಳ್ಯದ ನೆಲ್ಲೂರು ಕೆಮ್ರಾಜೆ ಗ್ರಾಮದಲ್ಲಿ ನಡೆದಿದೆ. ನೆಲ್ಲೂರು ಕೆಮ್ರಾಜೆ ಗ್ರಾಮದ ಮಾಪಲಕಜೆ ಎಂಬಲ್ಲಿನ ಮಾಪಲಕಜೆಯ ಜನಾರ್ಧನ ನಾಯಕ್ ಎಂಬವರ ಪುತ್ರಿ ಸಂಗೀತ ಮತ್ತು ಆಕೆಯ ಮಗು ಮೃತಪಟ್ಟವರು.

ಮಗು ಮನೆಯ ಸಮೀಪದ ಕೆರೆಗೆ ಕಾಲು ಜಾರಿ ಬಿದ್ದಿದ್ದು, ರಕ್ಷಿಸಲು ತಾಯಿ ಸಂಗೀತ ರವರು ಪ್ರಯತ್ನಿಸುವ ಸಂದರ್ಭ ಈಜು ಬಾರದೆ ಕೆರೆಯಲ್ಲಿ ಮುಳುಗಿ ಪ್ರಾಣ ಬಿಟ್ಟಿದ್ದಾರೆ. ತಾಯಿಯ ಮೃತದೇಹ ಕೆರೆಯಿಂದ ಹೊರತೆಗೆಯಲಾಗಿದ್ದು, ಮಗುವಿನ ದೇಹಕ್ಕಾಗಿ ಅಗ್ನಿಶಾಮಕ ದಳದವರು ಹುಡುಕಾಟ ಮಾಡುತ್ತಿದ್ದಾರೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ.

- Advertisement -

Related news

error: Content is protected !!