Wednesday, May 15, 2024
spot_imgspot_img
spot_imgspot_img

ಮಂಗಳೂರು: ಅಪಘಾತಕ್ಕೊಳಗಾದ ವ್ಯಕ್ತಿಯನ್ನು ಉಪಚರಿಸುತ್ತಿದ್ದಾಗ ಟ್ಯಾಂಕರ್ ಡಿಕ್ಕಿ ಹೊಡೆದು ಸುಳ್ಯದ ಯುವಕ ಸಾವು

- Advertisement -G L Acharya panikkar
- Advertisement -

ಮಂಗಳೂರಿನ ಬೈಕಂಪಾಡಿ ಬಳಿ ಅಪಘಾತಗೊಂಡಿದ್ದವರೊಬ್ಬರನ್ನು ಉಪಚರಿಸುತ್ತಿದ್ದ ವೇಳೆ ಟ್ಯಾಂಕರೊAದಕ್ಕೆ ಸಿಲುಕಿ ಎಳೆಯಲ್ಪಟ್ಟ ಘಟನೆ ನಡೆದಿದೆ. ಉಪಚರಿಸುತ್ತಿದ್ದ ಯುವಕನನ್ನು ತಕ್ಷಣವೇ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಇಂದು ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮೃತಪಟ್ಟಿದ್ದಾರೆ ಎನ್ನಲಾಗಿದೆ.

ಸಾವನ್ನಪ್ಪಿದ ಯುವಕನನ್ನು ಸುಳ್ಯದ ದೊಡ್ಡತೋಟ ಬಳಿಯ ಮೇರ್ಕಜೆ ಪುರುಷೋತ್ತಮ ಎಂಬವರ ಪುತ್ರ ತೇಜಸ್ (28 ). ಮಂಗಳೂರಿನಲ್ಲಿ ಇಲೆಕ್ಟ್ರೀಷಿಯನ್ ಆಗಿ ಉದ್ಯೋಗ ಮಾಡುತ್ತಿದ್ದ ಇವರು ನಿನ್ನೆ (ಜು.10) ಸಂಜೆಯ ವೇಳೆ ಕರ್ತವ್ಯ ಮುಗಿಸಿ ಮರಳುತ್ತಿದ್ದಾಗ ಮಂಗಳೂರಿನ ಬೈಕಂಪಾಡಿ ಎಂಬಲ್ಲಿ ದ್ವಿಚಕ್ರ ವಾಹನವೊಂದು ಅಪಘಾತಕ್ಕೀಡಾಗಿರುವುದನ್ನು ಕಂಡರು. ಅಪಘಾತಗೊಂಡಿದ್ದ ದ್ವಿಚಕ್ರ ವಾಹನ ಸವಾರರನ್ನು ಉಪಚರಿಸಿ, ಅಡ್ಡಬಿದ್ದಿದ್ದ ದ್ವಿಚಕ್ರವಾಹನವನ್ನು ಎತ್ತಿ ನಿಲ್ಲಿಸಿ, ಅದರಲ್ಲಿ ಕೂತು ದೂಡಿಕೊಂಡು ರಸ್ತೆಯ ಬದಿಗೆ ತರುತ್ತಿದ್ದರು.

ಈ ವೇಳೆಗೆ ಅದೇ ರಸ್ತೆಯಲ್ಲಿ ಬಂದ ಟ್ಯಾಂಕರೊ0ದು ತೇಜಸ್ ದೂಡಿಕೊಂಡು ಹೋಗುತ್ತಿದ್ದ ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆಯಿತು. ಲಾರಿಯ ಒಂದು ಬದಿಯ ಕಬ್ಬಣದ ಪೈಪ್ ತೇಜಸ್ ರವರ ಕಾಲಿನ ಮಧ್ಯೆ ಸಿಲುಕಿ ರಸ್ತೆಯಲ್ಲಿ ವಾಹನ ಸಮೇತ ಎಳೆಯಿತೆನ್ನಲಾಗಿದೆ. ಇದರಿಂದ ಸೊಂಟದ ಕೆಳಭಾಗ ಗಂಭೀರ ಗಾಯಗೊಂಡ ತೇಜಸ್ ರವರನ್ನು ಮಂಗಳೂರಿನ ಎ.ಜೆ. ಆಸ್ಪತ್ರೆಗೆ ತಂದು ಅಲ್ಲಿಂದ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಶಸ್ತ್ರಚಿಕಿತ್ಸೆ ನಡೆಸಲಾಯಿತು. ಆದರೆ ವಿಪರೀತ ರಕ್ತಸ್ರಾವದಿಂದ ಆರೋಗ್ಯದಲ್ಲಿ ಏರುಪೇರಾಗಿ ಇಂದು ಮುಂಜಾನೆ ಅಸುನೀಗಿದ್ದಾರೆ.

- Advertisement -

Related news

error: Content is protected !!