Sunday, April 28, 2024
spot_imgspot_img
spot_imgspot_img

ಸುಳ್ಯ: ಇಬ್ಬರು ಯುವಕರು ಆತ್ಮಹತ್ಯೆಗೆ ಶರಣು; ಕಾರಣ ಅಸ್ಪಷ್ಟ

- Advertisement -G L Acharya panikkar
- Advertisement -

ಸುಳ್ಯದಲ್ಲಿ ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರು ಯುವಕರು ಆತ್ಮಹತ್ಯಗೆ ಶರಣಾಗಿರುವ ಘಟನೆ ನಡೆದಿದೆ. ಇ‌ಬ್ಬರ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಸುಳ್ಯ: ವಳಲಂಬೆಯ ಯುವಕನೋರ್ವ ಬೋವಿಕಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕಾಸರಗೋಡಿನಲ್ಲಿ ಉದ್ಯೋಗಿಯಾಗಿದ್ದ ಜೈಸನ್ ಕಳೆದ ಶನಿವಾರದಿಂದ ಯಾರಿಗೂ ಸಂಪರ್ಕಕ್ಕೆ ಸಿಗದ ನಾಪತ್ತೆಯಾಗಿದ್ದರು.

ನಿನ್ನೆ ರಾತ್ರಿ ಬೋವಿನಕಾನದ ರೂಂನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆನ್ನಲಾಗಿದೆ. ಇವರು ವಳಲಂಬೆಯಲ್ಲಿ ನೆಲೆಸಿರುವ ಥೋಮಸ್ ಎಂಬವರ ಪುತ್ರ ಮೃತರು ತಾಯಿ, ಸಹೋದರಿ, ಪತ್ನಿ ಹಾಗೂ ಇಬ್ಬರು ಮಕ್ಕಳನ್ನು ಅಗಲಿದ್ದಾರೆ.

ಸುಳ್ಯ : ಮನೆಯಲ್ಲಿ ಯಾರು ಇಲ್ಲದ ವೇಳೆ ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸೆ.11 ರಂದು ಅರಂತೋಡಿನಲ್ಲಿ ನಡೆದಿದೆ. ಮೃತರನ್ನು ಅರಂತೋಡಿನ ಹೊನ್ನಪ್ಪ ಮಡಿವಾಳರವರ ಪುತ್ರ ಕೇಶವ ಎಂದು ಗುರುತಿಸಲಾಗಿದೆ.

ಮನೆಯವರೆಲ್ಲಾ ಕುಟುಂಬ ಸಮೇತರಾಗಿ ದೇವಸ್ಥಾನಕ್ಕೆ ತೆರಳಿದ್ದು, ಕೇಶವರವರು ಮಾತ್ರ ಮನೆಯಲ್ಲಿದ್ದರು ಎನ್ನಲಾಗಿದೆ.

astr
- Advertisement -

Related news

error: Content is protected !!