- Advertisement -
- Advertisement -
ಕಡಬ:-ಸರಕಾರಕ್ಕೆ ಸ್ಪಷ್ಟವಾದ ನಿರ್ಧಾರಗಳು ಇರಬೇಕು. ಆದರೆ ನಮ್ಮ ಪ್ರಜಾಪ್ರಭುತ್ವ ಆಡಳಿತ ವ್ಯವಸ್ಥೆಯಲ್ಲಿ ಈಗ ಯಾವುದೇ ಸ್ಪಷ್ಟತೆಗಳು ಇಲ್ಲ. ಅದು ಶಿಕ್ಷಣವಾಗಿರಲಿ, ಕೈಗಾರಿಕೆ ಹಾಗೂ ಅಭಿವೃದ್ಧಿ ವಿಚಾರದಲ್ಲಿ ಇರಬಹುದು ಯಾವುದೇ ಕ್ಷೇತ್ರದಲ್ಲೂ ಸ್ಪಷ್ಟತೆ ಇಲ್ಲದ ಸ್ಥಿತಿ ಇದೆ.ಎಂದು ಸುಳ್ಯ ಶಾಸಕ ಎಸ್. ಅಂಗಾರ ಹೇಳಿದರು.

ಅವರು ಕಡಬ ತಾಲೂಕಿನ ವಾಳ್ಯ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ನೂತನ ಅಂಗನವಾಡಿ ಕಟ್ಟಡದ ಶಿಲಾನ್ಯಾಸವನ್ನು ನೆರವೇರಿಸಿ ಮಾತನಾಡಿದರು.


ಬಳಿಕ ನಡೆದ ಸಭಾ ಕಾರ್ಯಕ್ರಮದಲ್ಲಿ ಶಾಸಕ ಎಸ್. ಅಂಗಾರ ಅವರನ್ನು ಗ್ರಾಮಸ್ಥರ ಪರವಾಗಿ ಅಭಿನಂದಿಸಲಾಯಿತು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಪಿ.ಪಿ ವರ್ಗೀಸ್,ತಾಲೂಕು ಪಂಚಾಯತ್ ಸದಸ್ಯ ಗಣೇಶ್ ಕೈಕುರೆ ಸೇರಿದಂತೆ ಸ್ಥಳೀಯ ಜನಪ್ರತಿನಿಧಿಗಳು,ಗ್ರಾಮಸ್ಥರು ಉಪಸ್ಥಿತರಿದ್ದರು.


- Advertisement -