Saturday, June 28, 2025
spot_imgspot_img
spot_imgspot_img

ಸುಳ್ಯ: ಶಾಲಾ ಜಗಲಿಯಲ್ಲಿ ವ್ಯಕ್ತಿಯ ಕೊಲೆ ಪ್ರಕರಣ; ಆರೋಪಿ ಅರೆಸ್ಟ್..!

- Advertisement -
- Advertisement -

ಸುಳ್ಯ: ವ್ಯಕ್ತಿಯೋರ್ವರ ಮೃತದೇಹವು ಕೊಲೆಗೈದ ಸ್ಥಿತಿಯಲ್ಲಿ ಶಾಲಾ ಜಗಲಿಯಲ್ಲಿ ಪತ್ತೆಯಾಗಿದ್ದ ಘಟನೆಗೆ ಸಂಬಂಧಿಸಿದಂತೆ ಕೃತ್ಯ ಎಸಗಿದ ಆರೋಪಿಯನ್ನು ಸುಳ್ಯ ಪೊಲೀಸರು ಬಂಧಿಸುವ ಮೂಲಕ ಪ್ರಕರಣವನ್ನು ಭೇದಿಸಿದ್ದಾರೆ.

ಬಂಧಿತ ಆರೋಪಿಯನ್ನು ಕಡಬ ತಾಲೂಕಿನ ಎಡಮಂಗಲದ ಉದಯ ಕುಮಾರ್ ನಾಯ್ಕ್ (35) ಎಂದು ಗುರುತಿಸಲಾಗಿದೆ.

ಸುಳ್ಯ ಸಮೀಪದ ಅಜ್ಜಾವರದ ಕಾಂತಮಂಗಲ ಶಾಲಾ ಜಗಲಿಯಲ್ಲಿ ಭಾನುವಾರ ರಾತ್ರಿ ವಿರಾಜಪೇಟೆಯ ವಸಂತ (45) ಎಂಬ ವ್ಯಕ್ತಿಯ ತಲೆಯ ಮೇಲೆ ಕಲ್ಲು ಎತ್ತಿ ಹಾಕಿ ಆರೋಪಿ ಕುಮಾರ್ ನಾಯ್ಕ್ ಕೊಲೆಗೈದಿದ್ದಾನೆ. ಆದರೆ ಈ ಕೃತ್ಯವು ಸೋಮವಾರ ಬೆಳಗ್ಗೆ ಬೆಳಕಿಗೆ ಬಂದಿದೆ.

ಆರೋಪಿ ಉದಯ ಕುಮಾರ್‌ಗೆ ಬಾರೊಂದರಲ್ಲಿ ಮೃತ ವಸಂತ ಅವರು ಪರಿಚಯವಾಗಿದ್ದು, ಭಾನುವಾರ ರಾತ್ರಿ ಕಾಂತಮಂಗಲಕ್ಕೆ ಆಟೋ ರಿಕ್ಷಾದಲ್ಲಿ ಬಂದು ಶಾಲಾ ಜಗಲಿಯಲ್ಲಿ ಮಲಗಿದ್ದರು. ಈ ವೇಳೆ ವಸಂತ ಎಂಬವರ ಬಳಿ 800 ರೂ. ಹಣ ಇರುವುದನ್ನು ಗಮನಿಸಿದ ಆರೋಪಿಯು ಆತನ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೈದಿದ್ದಾನೆ. ಬಳಿಕ ಬೆಳಿಗ್ಗೆ ಹಣ ಹಾಗೂ ಮೊಬೈಲ್ ನೊಂದಿಗೆ ಅಲ್ಲಿಂದ ಪರಾರಿಯಾಗಿದ್ದಾನೆ. ನಂತರ ಪ್ರಕರಣದ ತನಿಖೆಯನ್ನು ವಿವಿಧ ಆಯಾಮಗಳಲ್ಲಿ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಇನ್ನು ಆರೋಪಿಯು ಮನೆಗೆ ತೆರಳದೇ ಎಲ್ಲಂದರಲ್ಲಿ ತಿರುಗುತ್ತಿದ್ದುದ್ದ ಎಂದು ತನಿಖೆ ವೇಳೆ ಬೆಳಕಿಗೆ ಬಂದಿತ್ತು.

ಎಸ್.ಪಿ.ರಿಷ್ಯಂತ್ ಸಿ.ಬಿ., ಎ.ಎಸ್.ಪಿ. ರಾಜೇಂದ್ರ ಡಿ.ಎಸ್., ಪುತ್ತೂರು ಡಿವೈಎಸ್‌ಪಿ ಅರುಣ್ ನಾಗೇಗೌಡ ಮಾರ್ಗದರ್ಶನದಲ್ಲಿ ಸುಳ್ಯ ವೃತ್ತ ನಿರೀಕ್ಷಕ ಸತ್ಯನಾರಾಯಣ ನೇತೃತ್ವದಲ್ಲಿ ಪುತ್ತೂರು ಇನ್ಸ್ ಪೆಕ್ಟರ್ ಸತೀಶ್ ಜೆ.ಜೆ., ಸುಳ್ಯ ಎಸೈ ಮಹೇಶ್, ಸುಬ್ರಹ್ಮಣ್ಯ ಎಸೈ ಕಾರ್ತಿಕ್, ಸಿಬ್ಬಂದಿಗಳಾದ ಉದಯ್ ಗೌಡ, ಪ್ರಕಾಶ್, ಉದಯ್, ಅನಿಲ್ ಸೇರಿದಂತೆ ಸಿಬ್ಬಂದಿಗಳು ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

- Advertisement -

Related news

error: Content is protected !!