- Advertisement -
- Advertisement -
ಸುಳ್ಯ: ರಬ್ಬರ್ ಕಾರ್ಮಿಕ ದಂಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ದೇವಚಳ್ಳ ಗ್ರಾಮದ ಎಲಿಮಲೆಯಲ್ಲಿ ನಡೆದಿದೆ.
ಇಲ್ಲಿನ ಮನೆಯೊಂದರಲ್ಲಿ ವಾಸವಿದ್ದ ತಮಿಳುನಾಡು ಮೂಲದ ರಬ್ಬರ್ ಕಾರ್ಮಿಕ ದಂಪತಿ ನೇಣಿಗೆ ಶರಣಾಗಿದ್ದಾರೆ. ಮನೆಯಲ್ಲಿ ದಂಪತಿ ಮಾತ್ರವಿದ್ದು, ಬೆಳಿಗ್ಗೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮೃತರು ಇಬ್ಬರು ಪುತ್ರಿಯರು, ಓರ್ವ ಪುತ್ರನನ್ನು ಅಗಲಿದ್ದಾರೆ. ಮೃತ ರಾಜನ್ ರವರು ಕಳೆದ ಕೆಲ ಸಮಯದಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಎನ್ನಲಾಗಿದೆ.
- Advertisement -