- Advertisement -
- Advertisement -
ಸುಳ್ಯ: ಹಿಂದೂ ಹುಡುಗಿಯನ್ನು ತನ್ನ ಕಾರಿನಲ್ಲಿ ಕರೆದುಕೊಂಡು ಹೋಗಿದ್ದಕ್ಕೆ ಅನ್ಯಕೋಮಿನ ಯುವಕನಿಗೆ ಹಿಡಿದು ಥಳಿಸಿರುವ ಘಟನೆ ಸುಳ್ಯ ತಾಲೂಕಿನ ಅರಂತೋಡಿನಿಂದ ವರದಿಯಾಗಿದೆ. ಪೆಟ್ಟು ತಿಂದವ ಬಿಳಿಯಾರಿನ ಹುಡುಗ ಎಂದು ತಿಳಿದು ಬಂದಿದೆ.
ಸುಳ್ಯ ತಾಲೂಕಿನ ಅರಂತೋಡು ಕಡೆ ಟ್ಯಾಪಿಂಗ್ ಕೆಲಸ ವಹಿಸಿಕೊಂಡು ಮಾಡುತ್ತಿದ್ದ ಅನ್ಯಕೋಮಿನ ವ್ಯಕ್ತಿ ಮಹಿಳೆಯೊಬ್ಬರನ್ನು ತನ್ನ ಕಾರಲ್ಲಿ ಸುತ್ತಾಡಿಸುತ್ತಿದ್ದಾನೆ ಎಂಬ ಅನುಮಾನದಿಂದ ಸ್ಥಳೀಯರು ಕಾರನ್ನು ಹಿಂಬಾಲಿಸುತ್ತಿದ್ದರು ಎನ್ನಲಾಗಿದೆ. ನಿನ್ನೆ ಸಂಜೆ ಆತ ಮಹಿಳೆಯನ್ನು ಸುಳ್ಯಕ್ಕೆ ಬಿಟ್ಟು ತೊಡಿಕಾನ ಕಡೆಗೆ ಬರುತ್ತಿದ್ದಾನೆಂಬ ಮಾಹಿತಿ ದೊರೆತ ಸ್ಥಳೀಯರು ಅಡ್ಯಡ್ಕ ಸಮೀಪ ಕಾರನ್ನು ಅಡ್ಡಗಟ್ಟಿ ಅವರನ್ನು ಪ್ರಶ್ನಿಸಿದ್ದಾರೆ. ಈ ವೇಳೆ ಆತ ಅನ್ಯಕೋಮಿನ ಯುವಕ ಎಂದು ತಿಳಿದು ಬಂದಿದೆ. ರೊಚ್ಚಿಗೆದ್ದ ಜನ ಹಿಗ್ಗಾಮುಗ್ಗ ಥಳಿಸಿದ್ದಾರೆ. .ಹಲ್ಲೆಯಿಂದ ಗಾಯಗೊಂಡ ವ್ಯಕ್ತಿ ಸುಳ್ಯಕ್ಕೆ ಬಂದು ದೂರು ನೀಡಿದ್ದು ಪೋಲೀಸರು ಪ್ರಕರಣ ದಾಖಲಿಸಿದ್ದಾರೆ.
- Advertisement -