Thursday, May 2, 2024
spot_imgspot_img
spot_imgspot_img

ಸುಳ್ಯ: ರಬ್ಬರ್ ಟ್ಯಾಪಿಂಗ್‌ಗೆ ತೆರಳಿದ್ದ ಮಹಿಳೆಯ ಮೇಲೆ ಕಾಡುಹಂದಿ ದಾಳಿ ..!

- Advertisement -G L Acharya panikkar
- Advertisement -

ಸುಳ್ಯ: ಟ್ಯಾಪಿಂಗ್ ಮಾಡಲು ರಬ್ಬರ್ ತೋಟಕ್ಕೆ ತೆರಳಿದ್ದ ಮಹಿಳೆಯ ಮೇಲೆ ಕಾಡುಹಂದಿ ದಾಳಿ ಮಾಡಿ ತೀವ್ರ ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ದುಗಲಡ್ಕ ಕೂಟೇಲಿನಲ್ಲಿ ನಡೆದಿದೆ.

ಗಾಯಗೊಂಡ ಮಹಿಳೆ ಸುಳ್ಯ ತಾಲೂಕು ದುಗಲಡ್ಕ ಕೂಟೇಲು ನಿವಾಸಿ ಪದ್ಮಾವತಿ ಎಂದು ಗುರುತಿಸಲಾಗಿದೆ.

ಪದ್ಮಾವತಿ ಎಂಬವರು ಕೆ.ಎಫ್.ಡಿ.ಸಿ. ರಬ್ಬರ್ ತೋಟದ ಟ್ಯಾಪರ್ ಆಗಿದ್ದು ಅವರು ಫೆ. 22 ರಂದು ಮುಂಜಾನೆ ದುಗಲಡ್ಕ ಘಟಕದ ಕೂಟೇಲು ಪಿಲಿಕಜೆ ಎಂಬಲ್ಲಿ ರಬ್ಬರ್ ಟ್ಯಾಪಿಂಗ್ ಮಾಡುತ್ತಿರುವಾಗ ಈ ಘಟನೆ ನಡೆದಿದೆ. ಪೊದೆಯಲ್ಲಿದ್ದ ಕಾಡುಹಂದಿ ಪದ್ಮಾವತಿ ಮೇಲೆ ಏಕಾಏಕಿ ಧಾಳಿ ನಡೆಸಿತೆನ್ನಲಾಗಿದೆ.

ದಾಳಿಯಿಂದ ಪಾರಾಗಲು ಓಡಿದ ಮಹಿಳೆಯನ್ನು ಬೆನ್ನಟ್ಟಿದ ಕಾಡುಹಂದಿ ಮತ್ತೊಮ್ಮ ಕಚ್ಚಿ ತೀವ್ರ ಗಾಯಗೊಳಿಸಿತೆಂದು ತಿಳಿದುಬಂದಿದೆ. ವಿಷಯ ತಿಳಿದ ಇತರ ಟ್ಯಾಪರ್ ಗಳು ಕೆ.ಎಫ್.ಡಿ.ಸಿ. ಅಧಿಕಾರಿಗಳಿಗೆ ತಿಳಿಸಿದ ಕೂಡಲೇ ಅವರು ವಾಹನ ತಂದು, ನಿಗಮದ ಸಿಬ್ಬಂದಿ ಮತ್ತು ಊರವರು, ಬಂಧುಗಳು ಸುಳ್ಯ ಸರಕಾರಿ ಆಸ್ಪತ್ರೆಗೆ ತಂದು ದಾಖಲಿಸಿದ್ದಾರೆ. ರಬ್ಬರ್ ತೋಟದಲ್ಲಿ ಪೂದೆಗಳು ಹೆಚ್ಚಾಗಿ ಆಳೆತ್ತರಕ್ಕೆ ಬೆಳೆದಿದ್ದು ಇದರಲ್ಲಿ ಕಾಡು ಹಂದಿ ಸೇರಿದಂತೆ ವಿವಿಧ ವನ್ಯ ಪ್ರಾಣಿಗಳು ಅವಿತು ಕುಳಿತುಕೊಳ್ಳತ್ತಿದ್ದು, ಇಂತಹ ಘಟನೆಗಳು ನಡೆಯಲು ಕಾರಣವಾಗಿದೆ.

- Advertisement -

Related news

error: Content is protected !!