Saturday, June 28, 2025
spot_imgspot_img
spot_imgspot_img

ಸುಳ್ಯ: ದ್ವಿಚಕ್ರ ವಾಹನಗಳ ನಡುವೆ ಅಪಘಾತ; ಓರ್ವ ಮೃತ್ಯು..!

- Advertisement -
- Advertisement -

ಸುಳ್ಯ: ದ್ವಿಚಕ್ರ ವಾಹನಗಳ ನಡುವೆ ನಡೆದ ಅಪಘಾತದಲ್ಲಿ ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉದ್ಯೋಗಿ ಮೃತಪಟ್ಟ ಘಟನೆ ಸುಳ್ಯದ ಪೈಚಾರು – ಸೋಣಂಗೇರಿ ರಸ್ತೆಯ ಆರ್ತಾಜೆ ಎಂಬಲ್ಲಿ ನಡೆದಿದೆ.

ಮೃತಪಟ್ಟವರನ್ನು ಐವರ್ನಾಡು ಗ್ರಾಮದ ಪಾಲೆಪ್ಪಾಡಿ ನಿವಾಸಿ, ಉದ್ಯೋಗಿ ಭೋಜಪ್ಪ (50) ಎಂದು ಗುರುತಿಸಲಾಗಿದೆ.

ಸುಳ್ಯ ಕಡೆಯಿಂದ ಸೋಣಂಗೇರಿ ಕಡೆಗೆ ಸಂಚರಿಸುತ್ತಿದ್ದ ಬುಲೆಟ್ ಹಾಗೂ ಐವರ್ನಾಡಿನಿಂದ ಸುಳ್ಯ ಕಡೆಗೆ ತೆರಳುತ್ತಿದ್ದ ಸಾಗುತ್ತಿದ್ದ ಭೋಜಪ್ಪ ಅವರ ಹೋಂಡ ಬೈಕ್ ಢಿಕ್ಕಿಯಾಗಿದೆ. ಅಪಘಾತದಿಂದಾಗಿ ಬುಲೆಟ್‌ನಲ್ಲಿದ್ದ ನೆಲ್ಲೂರು ಕೆಮ್ರಾಜೆಯ ಮಂದ್ರಪ್ಪಾಡಿ ಅರುಣ್ ಹಾಗೂ ವಸಂತ ಅವರು ಗಾಯಗೊಂಡಿದ್ದು, ಸುಳ್ಯದ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬೈಕುಗಳು ಅಪಘಾತ ಸಂಭವಿಸಿದ ವೇಳೆ ತೀವ್ರ ಗಾಯವಾಗಿದ್ದ ಒಂದು ಬೈಕ್‌ ಸವಾರನನ್ನು ಆಸ್ಪತ್ರೆಗೆ ಸಾಗಿಸಿದರೂ ಮಾರ್ಗ ಮಧ್ಯೆ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಅವಘಡದಲ್ಲಿ ಎರಡೂ ಬೈಕ್‌ಗಳು ಜಖಂಗೊಂಡಿವೆ. ಈ ಬಗ್ಗೆ ಸುಳ್ಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!