Sunday, June 29, 2025
spot_imgspot_img
spot_imgspot_img

ಸುಳ್ಯ: ಪಾದಾಚಾರಿಗೆ ಬೈಕ್ ಡಿಕ್ಕಿ; ವ್ಯಕ್ತಿ ಸಾವು..!

- Advertisement -
- Advertisement -

ಸುಳ್ಯ: ರಸ್ತೆ ದಾಟುತ್ತಿದ್ದ ಪಾದಾಚಾರಿಯೋರ್ವರಿಗೆ ಬೈಕ್ ಢಿಕ್ಕಿ ಹೊಡೆದು, ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸುವ ವೇಳೆ ಸಾವನ್ನಪ್ಪಿದ ಘಟನೆ ಜಾಲ್ಸೂರಿನಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿಯನ್ನು ದೇಲಂಪಾಡಿ ಗ್ರಾಮದ ಬೆಳ್ಳಿಪ್ಪಾಡಿ ದೇವರಗುಂಡ ಪುರುಷೋತ್ತಮ ಗೌಡ (72) ಎಂದು ಗುರುತಿಸಲಾಗಿದೆ.

ಇವರು ಜಾಲ್ಸೂರಿನ ಅರಣ್ಯ ತಪಾಸಣಾ ಚೆಕ್ ಪೋಸ್ಟ್ ಬಳಿ ಮುಖ್ಯರಸ್ತೆ ದಾಟುತ್ತಿದ್ದ ಸಂದರ್ಭದಲ್ಲಿ ಪುತ್ತೂರು ಕಡೆಯಿಂದ ಬಂದ ಬೈಕ್ ಢಿಕ್ಕಿ ಹೊಡೆದಿದ್ದು, ತಲೆಗೆ ಗಂಭೀರವಾಗಿ ಗಾಯಗೊಂಡ ಅವರನ್ನು ತಕ್ಷಣ ಸ್ಥಳೀಯರು ಸೇರಿ ರಿಕ್ಷಾದಲ್ಲಿ ಸುಳ್ಯ ಆಸ್ಪತ್ರೆಗೆ ಕರೆದೊಯ್ದು ಪ್ರಥಮ ಚಿಕಿತ್ಸೆ ಕೊಡಿಸಿದ್ದು, ವೈದ್ಯರ ಸಲಹೆಯಂತೆ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುತ್ತಿದ್ದ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ.

- Advertisement -

Related news

error: Content is protected !!