Tuesday, May 21, 2024
spot_imgspot_img
spot_imgspot_img

ಸುಳ್ಯ: ರೇಣುಕಾ ಪ್ರಸಾದ್ ಒಡೆತನದ ಕಾಲೇಜಿಗೆ ಅಕ್ರಮ ಪ್ರವೇಶ ಮಾಡಿದ ಡಾ॥ ಚಿದಾನಂದ & ಟೀಮ್; FIR ದಾಖಲು

- Advertisement -G L Acharya panikkar
- Advertisement -

ಸುಳ್ಯ: ಸುಳ್ಯದ ಕುರುಂಜಿಭಾಗ್‌ನಲ್ಲಿರುವ ಪಾಲಿಟೆಕ್ನಿಕ್‌‌ ಕಾಲೇಜಿಗೆ ತಂಡವೊಂದು ಅಕ್ರಮ ಪ್ರವೇಶ ಮಾಡಿ ಅಲ್ಲಿನ ಪ್ರಾಂಶುಪಾಲರು ಹಾಗೂ ಸಿಬ್ಬಂದಿಯವರನ್ನು ಬೆದರಿಸಿರುವುದಾಗಿ ಸುಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸುಳ್ಯ ತಾಲೂಕು ಅಜ್ಜಾವರ ಗ್ರಾಮದ ಕಾಂತಮಂಗಲ ನಿವಾಸಿ ಡಾ| ಜ್ಯೋತಿ ಆರ್‌‌ ಪ್ರಸಾದ್‌‌ (52) ಎಂಬವರು ನೀಡಿದ ದೂರಿನಂತೆ ಸುಳ್ಯ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೂರುದಾರರ ಬಾವ ಡಾ |ಚಿದಾನಂದ, ಅವರ ಹೆಂಡತಿ ಶೋಭ ಚಿದಾನಂದ, ಮಗ ಅಕ್ಷಯ್‌‌ ಕೆ ಸಿ, ಮಗಳು ಡಾ| ಐಶ್ವರ್ಯ, ಸಂಬಂದಿ ಹೇಮನಾಥ ಕೆ ವಿ, ಜಗದೀಶ್‌‌ ಅಡ್ತಲೇ ಮತ್ತು ಅವರ ಇತರ ಸಿಬ್ಬಂದಿಗಳು ಅಕ್ರಮ ಪ್ರವೇಶ ಮಾಡಿದವರೆಂದು ದೂರಿನಲ್ಲಿ ತಿಳಿಸಲಾಗಿದೆ.

ಸೆ 6 ರಂದು ಡಾ ಜ್ಯೋತಿ ಆರ್‌‌ ಪ್ರಸಾದ್‌‌ ಅವರು ಮಂಗಳೂರಿಗೆ ಹೋಗಿದ್ದು ಈ ವೇಳೆ ಆರೋಪಿಗಳು ಕುರುಂಜಿಭಾಗ್‌ನಲ್ಲಿರುವ ಪಾಲಿಟೆಕ್ನಿಕ್‌‌ ಕಾಲೇಜಿಗೆ ಅಕ್ರಮ ಪ್ರವೇಶ ಮಾಡಿದ್ದಾರೆ. ಅಲ್ಲಿದ್ದ ಪ್ರಾಂಶುಪಾಲರು ಹಾಗೂ ಸಿಬ್ಬಂದಿಯವರ ಮೊಬೈಲ್‌‌ಗಳನ್ನು ಕೇಳಿ ಪಡೆದು, ಸಿ ಸಿ ಕ್ಯಾಮರಗಳ ಮತ್ತು ಇತರ ಮಾಹಿತಿ ಪಡೆದು, ಮೊಬೈಲ್‌‌ಗಳನ್ನು ಹಿಂತಿರುಗಿಸಿ, ಬೆದರಿಸಿ ಹೋಗಿರುತ್ತಾರೆ ಎಂದು ಆರೋಪಿಸಿರುವ ಅವರು , ಮಾಹಿತಿ ತಿಳಿದ ತಾನು ತಕ್ಷಣ ಗಾಬರಿಯಾಗಿ ಮಂಗಳೂರಿನಿಂದ ಸುಳ್ಯದ ಸಂಸ್ಥೆಗೆ ಬಂದಿರುವುದಾಗಿ ತಿಳಿಸಿದ್ದಾರೆ.

- Advertisement -

Related news

error: Content is protected !!