Sunday, May 19, 2024
spot_imgspot_img
spot_imgspot_img

ಸುಳ್ಯ: ಪಟಾಕಿ ಸಿಡಿದು ವ್ಯಕ್ತಿ ಗಂಭೀರ ಗಾಯ..!

- Advertisement -G L Acharya panikkar
- Advertisement -

ಸುಳ್ಯ: ಪಟಾಕಿ ಸಿಡಿಸುವ ವೇಳೆ ವ್ಯಕ್ತಿಯೋರ್ವರ ಕೈಯಲ್ಲಿ ಪಟಾಕಿ ಸಿಡಿದು ಗಂಭೀರ ಗಾಯಗೊಂಡ ಘಟನೆ ಸುಳ್ಯ ಕನಕಮಜಲಿನಲ್ಲಿ ನಡೆದಿದೆ.

ಗಂಭೀರ ಗಾಯಗೊಂಡ ವ್ಯಕ್ತಿ ಗ್ರಾಮದ ಗಬ್ಬಲಡ್ಕ ಚಂದ್ರಶೇಖರ ಎಂದು ಗುರುತಿಸಲಾಗಿದೆ.

ಕನಕಮಜಲಿನ ಶ್ರೀ ಆತ್ಮಾರಾಮ ಭಜನಾ ಮಂದಿರದಲ್ಲಿ ಏಕಾಹ ಭಜನೆ ಮಂಗಳವಾರ ನಡೆಯುತ್ತಿತ್ತು. ಈ ವೇಳೆ ಗ್ರಾಮದ ಗಬ್ಬಲಡ್ಕ ಚಂದ್ರಶೇಖರ ಅವರು ಪಟಾಕಿಯೊಂದನ್ನು ಸಿಡಿಸುವ ವೇಳೆ ಕೈಯಲ್ಲೇ ಸ್ಫೋಟಗೊಂಡಿದ್ದು ಕೈಯ ಬೆರಳುಗಳಿಗೆ ಗಂಭೀರವಾಗಿ ಗಾಯವಾಗಿದೆ. ತಕ್ಷಣವೇ ಸ್ಥಳೀಯರು ಸೇರಿ ಅವರನ್ನು ಸುಳ್ಯದ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಿದ್ದಾರೆ.

- Advertisement -

Related news

error: Content is protected !!