Thursday, May 2, 2024
spot_imgspot_img
spot_imgspot_img

ಸುಳ್ಯ: ನವ ವಿವಾಹಿತ ನೇಣು ಬಿಗಿದು ಆತ್ಮಹತ್ಯೆಗೆ ಶರಣು..!

- Advertisement -G L Acharya panikkar
- Advertisement -

ಸುಳ್ಯ: ವಾರದ ಹಿಂದೆ ವಿವಾಹವಾಗಿದ್ದ ಯುವಕನೊಬ್ಬ ತನ್ನ ಕೋಣೆಯಲ್ಲಿ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಸುಳ್ಯದಲ್ಲಿ ನಡೆದಿದೆ.

ಆತ್ಮಹತ್ಯೆ ಮಾಡಿಕೊಂಡ ಯುವಕ ಸುಳ್ಯ ತಾಲೂಕು ಆಲೆಟ್ಟಿ ಗ್ರಾಮದ ಗುಂಡ್ಯ ನಿವಾಸಿ ದಿ.ಕೊರಗಪ್ಪ ಎಂಬವರ ಪುತ್ರ ರಾಜೇಶ್ ಗುಂಡ್ಯ( 29) ಎಂದು ಗುರುತಿಸಲಾಗಿದೆ.

ಮೃತ ಯುವಕ ಗುಂಡ್ಯ ಜನನಿ ಫ್ರೆಂಡ್ಸ್ ಕ್ಲಬ್ ನ ಸಕ್ರಿಯ ಸದಸ್ಯರಾಗಿ ಗುರುತಿಸಿಕೊಂಡಿದ್ದರು. ಕಳೆದ ಡಿ.21 ರಂದು ಕಾಣಿಯೂರಿನ ಯುವತಿ ಜೊತೆ ವಿವಾಹವಾಗಿದ್ದು, ಅತಿಥಿ ಸತ್ಕಾರ ಕಾರ್ಯಕ್ರಮವು ಡಿ.24 ರಂದು ಸುಳ್ಯದ ಪುರಭವನದಲ್ಲಿ ಏರ್ಪಡಿಸಿದ್ದರು. ಬಳಿಕ ತನ್ನ ಪತ್ನಿಯೊಂದಿಗೆ ಗುಂಡ್ಯ ಮನೆಯಲ್ಲಿದ್ದರು. ಮನೆಯವರು ಎದ್ದು ಹೋದ ಬಳಿಕ ಅಲ್ಲೇ ಇದ್ದ ಸೀರೆಯನ್ನು ಬಳಸಿ ಈ ಕೃತ್ಯವೆಸಗಿಕೊಂಡಿರುವುದಾಗಿ ತಿಳಿದು ಬಂದಿದೆ.

- Advertisement -

Related news

error: Content is protected !!