Wednesday, May 1, 2024
spot_imgspot_img
spot_imgspot_img

ಸುಳ್ಯ: ಮೀನು ಹಿಡಿಯಲು ನದಿಗಿಳಿದ ನಾಲ್ವರಲ್ಲಿ ಓರ್ವ ನೀರಿನಲ್ಲಿ ಮುಳುಗಿ ಸಾವು..!

- Advertisement -G L Acharya panikkar
- Advertisement -

ಸುಳ್ಯ: ಮೀನು ಹಿಡಿಯಲು ನದಿಗಿಳಿದ ನಾಲ್ವರಲ್ಲಿ ಓರ್ವ ನದಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ದಕ್ಷಿಣ ಕನ್ನಡದ ಸುಳ್ಯ ಮಂಡೆಕೋಲು ಗ್ರಾಮದಲ್ಲಿ ನಡೆದಿದೆ.

ಮೃತಪಟ್ಟವರನ್ನು ಈಶ್ವರಮಂಗಲ ಪ್ರವೀಣ್ ಎಂದು ಗುರುತಿಸಲಾಗಿದೆ.

ಮಂಡೆಕೋಲು ಗ್ರಾಮ ಮುರೂರು ಸಮೀಪ ಪರಪ್ಪೆ ನದಿಯಲ್ಲಿ ಈ ದುರ್ಘಟನೆ ನಡೆದಿದೆ. ಈಶ್ವರ ಮಂಗಲದ ನಾಲ್ಕು ಜನ ಪರಪ್ಪೆ ನದಿಗೆ ಮೀನು ಹಿಡಿಯಲು ಬಂದಿದ್ದರೆನ್ನಲಾಗಿದೆ. ಈ ಸಂದರ್ಭದಲ್ಲಿ ನಾಲ್ವರಲ್ಲಿ ಒಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದು ಮೃತದೇಹವನ್ನು ಪೈಚಾರ್ ಮುಳುಗು ತಜ್ಞರ ತಂಡದವರು ನದಿಯಿಂದ ಮೇಲೆತ್ತಿದ್ದಾರೆ. ಸುಳ್ಯ ಅಸ್ಪತ್ರೆಯ ಶವಗಾರದಲ್ಲಿ ಮೃತಹೇಹವನ್ನು ಇರಿಸಲಾಗಿದೆ. ಸುಳ್ಯ ಪೋಲಿಸರು ಸ್ಥಳ ಪರಿಶೀಲಿಸಿ ಪ್ರಕರಣ ದಾಖಲು ಮಾಡಿದ್ದು ತನಿಖೆ ನಡೆಸುತ್ತಿದ್ದಾರೆ.

- Advertisement -

Related news

error: Content is protected !!