- Advertisement -
- Advertisement -
ಸುಳ್ಯ: ದಿಢೀರ್ ಆಗಿ ಅನಾರೋಗ್ಯ ಕಾಣಿಸಿಕೊಂಡು ಚಿಕಿತ್ಸೆ ಫಲಕಾರಿಯಾಗದೇ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರೊಬ್ಬರು ಮೃತಪಟ್ಟ ಘಟನೆ ಸುಳ್ಯ ತಾಲೂಕಿನ ಐವತ್ತೊಕ್ಲು ಗ್ರಾಮದಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ಬಿಜೆಪಿ ಬೂತ್ ಸಮಿತಿ ಅಧ್ಯಕ್ಷರಾಗಿದ್ದ ಐವತ್ತೊಕ್ಲು ಗ್ರಾಮದ ಮೇಲ್ಪಾಡಿಯ ಚಂದ್ರಶೇಖರ ಮೇಲ್ಪಾಡಿ (35) ಎಂದು ಗುರುತಿಸಲಾಗಿದೆ.
ಮಾ.31 ರಂದು ಮುಂಜಾನೆ ಹೊಟ್ಟೆನೋವು ಬಂದು ತೀವ್ರ ಅನಾರೋಗ್ಯಗೊಂಡ ಅವರನ್ನುಕಡಬ ತಾಲೂಕಿನ ಕಾಣಿಯೂರಿನ ಆಸ್ಪತ್ರೆಗೆ ಕರೆತಂದು ಅಲ್ಲಿನ ವೈದ್ಯರ ಸಲಹೆ ಮೇರೆಗೆ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಗಿತ್ತು. ಆದರೆ ಅಲ್ಲಿ ತಲುಪುವ ವೇಳೆ ಅವರು ಮೃತ ಪಟ್ಟಿರುವುದಾಗಿ ವೈದ್ಯರು ತಿಳಿಸಿದ್ದಾರೆ . ಐವತ್ತೊಕ್ಲು ಗ್ರಾಮದ ಒಂದನೇ ವಾರ್ಡ್ ಬೂತ್ ಅಧ್ಯಕ್ಷನಾಗಿ, ಬಿಜೆಪಿ ಪಕ್ಷದ ಕಾರ್ಯಕರ್ತನಾಗಿ ಸೇವೆ ಸಲ್ಲಿಸುತ್ತಿದ್ದರು.
- Advertisement -