- Advertisement -
- Advertisement -
ಸುಳ್ಯ: ಗುತ್ತಿಗಾರು ಕಡೆ ಬರುತ್ತಿದ್ದ ಸ್ಕೂಟಿಗೆ ಎದುರಿನಿಂದ ಬಂದ ಕೆ.ಎಸ್.ಆರ್.ಟಿ.ಸಿ ಬಸ್ ಗುದ್ದಿದ ಪರಿಣಾಮ ಸ್ಕೂಟಿ ಸವಾರ ಮೃತಪಟ್ಟ ಘಟನೆ ಗುತ್ತಿಗಾರು ಬಾಕಿಲ ಎಂಬಲ್ಲಿ ನಡೆದಿದೆ.
ಮೃತಪಟ್ಟ ವ್ಯಕ್ತಿ ನಡುಗಲ್ಲು ನಿವಾಸಿ ಶಿವರಾಮ ಗೌಡ (70) ಎಂದು ಗುರುತಿಸಲಾಗಿದೆ.
ಹಿಂಬದಿ ಕುಳಿತಿದ್ದ ಮಗಳು ನವ್ಯಶ್ರೀ ಯ ಕಾಲಿಗೆ ಗಂಭೀರ ಗಾಯಗಳಾಗಿದ್ದು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ತಿಳಿದುಬಂದಿದೆ. ಪೆರಾಜೆ ದೇವಸ್ಥಾನಕ್ಕೆ ತೆರಳಿ ಹಿಂತಿರುಗುತ್ತಿದ್ದ ವೇಳೆ ಈ ಘಟನೆ ನಡೆದಿದೆ.
- Advertisement -