Sunday, April 28, 2024
spot_imgspot_img
spot_imgspot_img

ಸುಳ್ಯ: ಮಹಿಳೆಗೆ ಜಾತಿನಿಂದನೆ ಮಾಡಿ ಜೀವ ಬೆದರಿಕೆ ಆರೋಪ; ಪ್ರಕರಣ ದಾಖಲು..!

- Advertisement -G L Acharya panikkar
- Advertisement -

ಸುಳ್ಯ: ಜಮೀನನ್ನು ಸ್ವಾಧೀನಕ್ಕೆ ಪಡೆದುಕೊಳ್ಳುವ ನಿಟ್ಟಿನಿಂದ ಮಹಿಳೆಗೆ ಜಾತಿನಿಂದನೆ ಮಾಡಿ, ಅವಾಚ್ಯ ಶಬ್ದಗಳಿಂದ ಬೈದು, ಜೀವ ಬೆದರಿಕೆ ಹಾಕಿರುವ ಘಟನೆ ಸುಳ್ಯದ ಮುರುಳ್ಯ ಗ್ರಾಮದಲ್ಲಿ ನಡೆದಿದೆ.

ಆರೋಪಿಯನ್ನು ತಿಮ್ಮಪ್ಪ ಗೌಡ ಎಂದು ಗುರುತಿಸಲಾಗಿದೆ.

ಮುರುಳ್ಯ ಗ್ರಾಮ, ಸುಳ್ಯ ನಿವಾಸಿ ಚೋಮಣ್ಣ ನಾಯ್ಕ (60) ಎಂಬವರ ,ಸುಳ್ಯ ತಾಲೂಕು ಮುರುಳ್ಯ ಗ್ರಾಮದ ನಿಂತಿಕಲ್ಲು ಎಂಬಲ್ಲಿ ಜಮೀನು ಹೊಂದಿದ್ದು , ಆ ಜಮೀನಿನಲ್ಲಿ ಸಣ್ಣ ಹೊಟೇಲು ಇಟ್ಟುಕೊಂಡು ವ್ಯಾಪಾರ ಮಾಡುತ್ತಿದ್ದರು. ಜಮೀನಿನ ಪಕ್ಕದ ಜಮೀನಿನಲ್ಲಿ ಕಟ್ಟಡವನ್ನು ಹೊಂದಿರುವ ಆರೋಪಿ ತಿಮ್ಮಪ್ಪ ಗೌಡ ಜಮೀನನ್ನು ಸ್ವಾಧೀನಕ್ಕೆ ಪಡೆದುಕೊಳ್ಳುವ ನಿಟ್ಟಿನಿಂದ ಈ ಹಿಂದಿನಿಂದಲೂ ಕಿರುಕುಳ ನೀಡುತಿದ್ದರು. ಆರೋಪಿ ಹೊಟೇಲ್ ಬಳಿ ಬಂದು, ಚೋಮಣ್ಣ ನಾಯ್ಕ ಅವರ ಪತ್ನಿ ಬೇಬಿ ಎಂಬವರನ್ನು ಉದ್ದೇಶಿಸಿ ಜಾತಿನಿಂದನೆ ಮಾಡಿ, ಅವಾಚ್ಯ ಶಬ್ದಗಳಿಂದ ಬೈದು, ಕೈಯಲ್ಲಿ ಕತ್ತಿ ಹಿಡಿದು ಕಡಿದು ಕೊಲ್ಲುವುದಾಗಿ ಜೀವ ಬೆದರಿಕೆಯನ್ನು ಒಡ್ಡಿರುತ್ತಾರೆ. ಈ ಬಗ್ಗೆ ನೀಡಿದ ದೂರಿನಂತೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ ತನಿಖೆ ನಡೆಸಲಾಗುತ್ತಿದೆ.

- Advertisement -

Related news

error: Content is protected !!