- Advertisement -
- Advertisement -
ಬೆಂಗಳೂರು: ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಇನ್ಮುಂದೆ ‘ಕೆಎಸ್ಆರ್ಟಿಸಿ’ ಬ್ರ್ಯಾಂಡ್ ನೇಮ್ ಬಳಸುವಂತಿಲ್ಲ ಎಂದು ಟ್ರೇಡ್ ಮಾರ್ಕ್ಸ್ ರಿಜಿಸ್ಟ್ರಿ ಆದೇಶ ನೀಡಿದೆ. ಹೀಗಾಗಿ ಕೆಎಸ್ಆರ್ಟಿ ಕೇರಳದ ಪಾಲಾದ ಹಿನ್ನೆಲೆಯಲ್ಲಿ ನಮ್ಮ ಕೆಎಸ್ಆರ್ಟಿಸಿಗೆ ಸಂಸದೆ ಸುಮಲತಾ ಅಂಬರೀಶ್ ಹೊಸ ಬ್ರ್ಯಾಂಡ್ ನೇಮ್ ಸೂಚಿಸಿ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ.
ಮಾನ್ಯ ಮುಖ್ಯಮಂತ್ರಿ ಅವರೇ.. ರಾಜ್ಯದ ಮೂಲೆ ಮೂಲೆಗೂ ತಲುಪಿ ಪ್ರಯಾಣಿಕರನ್ನ ಒಂದು ಕಡೆಯಿಂದ ಇನ್ನೊಂದು ಕಡೆಗೆ ತಲುಪಿಸುವ ‘ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಸುಗಳ ಸೇವೆಯ ಟ್ರೇಡ್ ಮಾರ್ಕ್ 27 ವರ್ಷಗಳ ಕಾನೂನು ಹೋರಾಟದ ಬಳಿಕ ಕೇರಳ ರಾಜ್ಯದ ಪಾಲಾಗಿರುವ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯದ ಸಾರಿಗೆ ನಿಗಮಕ್ಕೆ ಸಂವಿಧಾನ ಶಿಲ್ಪಿ ಡಾ.ಬಿಆರ್ ಅಂಬೇಡ್ಕರ್ ಅವರ ನೆನಪಿನಾರ್ಥ ‘‘ಬಾಬಾ ಸಾಹೇಬ್ ಸಾರಿಗೆ ಸಂಸ್ಥೆ’’ ಎಂದು ಮರುನಾಮಕರಣ ಮಾಡಲು ರಾಜ್ಯ ಸರ್ಕಾರವನ್ನು ಈ ಮೂಲಕ ಗೌರವಪೂರ್ವಕವಾಗಿ ಕೋರುತ್ತೇನೆ ಎಂದು ಮನವಿ ಮಾಡಿಕೊಂಡಿದ್ದಾರೆ.
- Advertisement -