Sunday, June 14, 2026
spot_imgspot_img
spot_imgspot_img

ಹನಿಟ್ರ‍್ಯಾಪ್ ಪ್ರಕರಣ ತನಿಖೆಗೆ ಆಗ್ರಹಿಸಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಜಾಗೊಳಿಸಿದ ಸುಪ್ರೀಂ

- Advertisement -
- Advertisement -

ನವದೆಹಲಿ: ಕರ್ನಾಟಕ ಸರ್ಕಾರದ ಸಚಿವರ ಮೇಲೆ ನಡೆದಿದೆ ಎನ್ನಲಾದ ಹನಿಟ್ರ‍್ಯಾಪ್ ಪ್ರಕರಣದ ಕುರಿತು ತನಿಖೆಗೆ ಆಗ್ರಹಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನ ಸುಪ್ರೀಂ ಕೋರ್ಟ್ ಇಂದು ವಜಾಗೊಳಿಸಿದೆ.

ಸುಪ್ರೀಂ ಕೋರ್ಟ್‌ನ ನ್ಯಾ. ವಿಕ್ರಮ್‌ನಾಥ್ ನೇತೃತ್ವದ ತ್ರಿಸದಸ್ಯ ಪೀಠ ಈ ಅರ್ಜಿಯನ್ನು ವಜಾಗೊಳಿಸಿತು. ಅರ್ಜಿಯ ವಿಚಾರಣೆ ನಡೆಸಿದ ಪೀಠ ಅರ್ಜಿದಾರ ಬಿನಯ್ ಕುಮಾರ್ ಸಿಂಗ್ ತರಾಟೆಗೆ ತೆಗೆದುಕೊಂಡಿತು.

ನೀವು ಜಾರ್ಖಂಡ್ ಮೂಲದವರು, ಕರ್ನಾಟಕಕ್ಕೂ ನಿಮಗೂ ಏನು ಸಂಬಂಧ? ಪೊಲಿಟಿಕಲ್ ನಾನ್‌ಸೆನ್ಸ್ಗಳನ್ನು ವಿಚಾರಣೆ ನಡೆಸಲು ನಾವು ಇಲ್ಲಿ ಕೂತಿಲ್ಲ. ನ್ಯಾಯಾಧೀಶರು ಯಾಕೆ ಹನಿಟ್ರ‍್ಯಾಪ್‌ಗೆ ಒಳಗಾಗುತ್ತಾರೆ? ಅದನ್ನು ನ್ಯಾಯಾಧೀಶರು ನೋಡಿಕೊಳ್ತಾರೆ. ಇಂತಹ ಅರ್ಜಿ ವಿಚಾರಣೆ ನಡೆಸಿಕೊಂಡು ಕೂರಲು ನಮಗೆ ಸಾಧ್ಯವಿಲ್ಲ. ಸುಪ್ರೀಂ ಕೋರ್ಟ್‌ಗೆ ಮಾಡಲು ಸಾಕಷ್ಟು ಕೆಲಸ ಇದೆ ಎಂದು ಬಿನಯ್ ಕುಮಾರ್‌ರನ್ನ ಪೀಠ ತರಾಟೆಗೆ ತೆಗೆದುಕೊಂಡಿದೆ.

ಕರ್ನಾಟಕದಲ್ಲಿ ಹಿರಿಯ ಸಚಿವರು, ಶಾಸಕರು, ರಾಜಕೀಯ ಮುಖಂಡರು ಮತ್ತು ನ್ಯಾಯಮೂರ್ತಿಗಳು ಸೇರಿದಂತೆ ೪೮ ಜನರನ್ನು ಗುರಿಯಾಗಿಟ್ಟುಕೊಂಡು ಹನಿಟ್ರ‍್ಯಾಪ್‌ ಪ್ರಕರಣ ನಡೆದಿದೆ. ಈ ಬಗ್ಗೆ ಸಚಿವರೇ ವಿಧಾನಸಭೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಹೀಗಾಗೀ ಈ ಬಗ್ಗೆ ಸಿಬಿಐ ಅಥಾವ ಹೈಕೋರ್ಟ್ ನ್ಯಾಯಧೀಶರ ನೇತೃತ್ವದಲ್ಲಿ ಎಸ್‌ಐಟಿ ತನಿಖೆಗೆ ನಿರ್ದೇಶನ ನೀಡಬೇಕು ಎಂದು ಬಿನಯ್ ಕುಮಾರ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು.

- Advertisement -

Related news

error: Content is protected !!