- Advertisement -
- Advertisement -
ನವದೆಹಲಿ: ರಾಜ್ಯ ಸರ್ಕಾರದ ಒಪ್ಪಿಗೆಯಿಲ್ಲದೆ ಸಿಬಿಐ ತನಿಖೆ ನಡೆಸಲು ಸಾಧ್ಯವಿಲ್ಲ ಮತ್ತು ಕೇಂದ್ರವು ಅನುಮತಿಯಿಲ್ಲದೆ ರಾಜ್ಯದ ವ್ಯಾಪ್ತಿಯನ್ನು ವಿಸ್ತರಿಸಲು ಸಾಧ್ಯವಿಲ್ಲ ಎಂದು ಉತ್ತರಪ್ರದೇಶದಲ್ಲಿ ನಡೆದ ಭ್ರಷ್ಟಾಚಾರ ಪ್ರಕರಣದ ಆರೋಪಿಗಳ ಅರ್ಜಿ ವಿಚಾರಣೆ ನಡೆಸಿ ಸುಪ್ರೀಂ ಕೋರ್ಟ್ ತೀರ್ಪು ನೀಡಿದೆ.
“ಕಾನೂನಿನ ಪ್ರಕಾರ ರಾಜ್ಯದ ಒಪ್ಪಿಗೆ ಅತ್ಯಗತ್ಯ ಮತ್ತು ರಾಜ್ಯದ ಒಪ್ಪಿಗೆಯಿಲ್ಲದೆ ಕೇಂದ್ರವು ಸಿಬಿಐ ವ್ಯಾಪ್ತಿಯನ್ನು ವಿಸ್ತರಿಸಲು ಸಾಧ್ಯವಿಲ್ಲ. ಕಾನೂನು ಸಂವಿಧಾನದ ಫೆಡರಲ್ ರಚನೆಗೆ ಅನುಗುಣವಾಗಿದೆ ಎಂದು ಸುಪ್ರೀಂ ಕೋರ್ಟ್ ಬುಧವಾರ ತೀರ್ಪು ನೀಡಿದೆ.
ರಾಜಸ್ಥಾನ, ಬಂಗಾಳ, ಜಾರ್ಖಂಡ್, ಕೇರಳ, ಮಹಾರಾಷ್ಟ್ರ, ಛತ್ತೀಸ್ಗಢ, ಪಂಜಾಬ್ ಮತ್ತು ಮಿಜೋರಾಂ ರಾಜ್ಯಗಳಲ್ಲಿನ ಸಿಬಿಐ ತನಿಖೆಗೆ ಒಪ್ಪಿಗೆಯನ್ನು ರದ್ದುಪಡಿಸಿರುವ ನಿರ್ಧಾರಕ್ಕೆ ಮಹತ್ವ ತುಂಬಿದೆ.
- Advertisement -