Friday, April 19, 2024
spot_imgspot_img
spot_imgspot_img

ಸುರತ್ಕಲ್: ಹೆದ್ದಾರಿಯಲ್ಲಿ ಬೈಕ್ ನ ಹಿಂದೆ ನಾಯಿಯೊಂದನ್ನು ಕಟ್ಟಿ ಎಳೆದುಕೊಂಡು ಹೋದ ಪಾಪಿಗಳು!

- Advertisement -G L Acharya panikkar
- Advertisement -

ಮಂಗಳೂರು : ನಾಯಿಯೊಂದನ್ನು ಚಲಿಸುತ್ತಿರುವ ಬೈಕ್ ನ ಹಿಂದೆ ಬಲವಾಗಿ ಹಗ್ಗದಲ್ಲಿ ಕಟ್ಟಿ ಎಳೆದುಕೊಂಡು ಹೋಗಿರುವ ಹೃದಯವಿದ್ರಾವಕ ಘಟನೆ ಮಂಗಳೂರಿನ ಸುರತ್ಕಲ್ ನಲ್ಲಿ ನಡೆದಿದೆ.

ಮಂಗಳೂರು ಹೊರವಲಯಯದ ಸುರತ್ಕಲ್ ಬಳಿಯ ಎನ್ ಐಟಿಕೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಇಬ್ಬರು ಸವಾರರು ಬೈಕ್ ನಲ್ಲಿ ಕುಳಿತು ಶ್ವಾನವೊಂದನ್ನು ಹಗ್ಗದಲ್ಲಿ ಕಟ್ಟಿ ಅದನ್ನು ದರದರನೇ ಎಳೆದುಕೊಂಡು ಹೋಗಿದ್ದಾರೆ. ಈ ಘಟನೆಯ ವೀಡಿಯೊವನ್ನು ರಸ್ತೆಯಲ್ಲಿ ಹೋಗುತ್ತಿದ್ದ ಬೇರೆ ಬೈಕ್ ಸವಾರರು ಚಿತ್ರೀಕರಿಸಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾರೆ. ಸದ್ಯ ಸಾರ್ವಜನಿಕರಿಂದ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.

ಈ ಘಟನೆ ಏಪ್ರಿಲ್ 15 ರ ರಾತ್ರಿ ನಡೆದಿದೆ ಎನ್ನಲಾಗಿದೆ. ಸದ್ಯ ಪ್ರಾಣಿಪ್ರಿಯರು ಸೇರಿದಂತೆ ಸಾರ್ವಜನಿಕರು ಇಂಥ ಮಾನವೀಯತೆ ಮರೆತೆ ಮಾನವನ ಮೃಗತ್ವದ ವ್ಯಕ್ತಿತ್ವಕ್ಕೆ ಜೋರಾಗಿಯೇ ಗರಂ ಆಗಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ವೀಡಿಯೊ ವೈರಲ್ ಆಗುತ್ತಿರುವ ಬೆನ್ನಲೇ ಸುರತ್ಕಲ್ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಶಂಕಿತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

- Advertisement -

Related news

error: Content is protected !!