ಸುರತ್ಕಲ್: ರಸ್ತೆ ಬದಿ ಹೋಗುತ್ತಿದ್ದ ಹಿಂದೂ ಯುವತಿಯನ್ನು ಅನ್ಯಕೋಮಿನ ಯುವಕನೊರ್ವ ಚುಡಾಯಿಸಿ, 500 ರೂ. ನೀಡುತ್ತೇನೆ. ನನ್ನ ಜೊತೆ ಬಾ ಎಂದು ಅಸಭ್ಯವಾಗಿ ವರ್ತಿಸಿದ ಘಟನೆ ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯ ಕೃಷ್ಣಾಪುರದಲ್ಲಿ ವರದಿಯಾಗಿದೆ.
ಆರೋಪಿ ಬಾಲಕ ಸ್ಥಳೀಯ ಪ್ರೌಢ ಶಾಲೆಯ 10ನೇ ತರಗತಿ ವಿದ್ಯಾರ್ಥಿಯಾಗಿದ್ದು, ಮೂಲತಃ ಜಪ್ಪಿನ ಮೊಗರು ನಿವಾಸಿ, ಸದ್ಯ ಕೃಷ್ಣಾಪುರದಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದಾರೆ ಎನ್ನಲಾಗಿದೆ.
ಯುವತಿ ಮನೆ ಸಮೀಪದ ಅಂಗಡಿಗೆ ಹೋಗುತ್ತಿದ್ದ ವೇಳೆ ಬೈಕ್ ನಲ್ಲಿ ಬಂದ ಬಾಲಕ, ಚುಡಾಯಿಸಿ 500 ರೂ. ನೀಡುತ್ತೇನೆ. ನನ್ನ ಜೊತೆ ಬಾ ಎಂದು ಕರೆದಿದ್ದಾನೆ ಎನ್ನಲಾಗಿದೆ. ಈ ವೇಳೆ ಯುವತಿ ಜೋರಾಗಿ ಕಿರುಚಾಡಿದ್ದು, ಆಗ ಸ್ಥಳೀಯರು ಸ್ಥಳದಲ್ಲಿ ಜಮಾಯಿಸಿದ್ದಾರೆ. ಸಾರ್ವಜನಿಕರನ್ನು ಕಂಡ ಬಾಲಕ ಪರಾರಿಯಾಗಿದ್ದಾನೆ ಎಂದು ತಿಳಿದು ಬಂದಿದೆ.
ಯುವತಿಯ ದೂರು ದಾಖಲಿಸಿಕೊಂಡ ಪೊಲೀಸರು ಬಾಲಕನ ತಂದೆಯನ್ನು ಸಂಪರ್ಕಿಸಿ ಆರೋಪಿಯನ್ನು ಪೊಲೀಸ್ ಠಾಣೆಗೆ ಕರೆಸಿ ಬಳಿಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಕಳುಹಿಸಿಕೊಟ್ಟಿದ್ದಾರೆ ಎಂದು ತಿಳಿದು ಬಂದಿದ್ದು, ಈ ಸಂಬಂಧ ಯಾವುದೇ ಪ್ರಕರಣ ದಾಖಲಾಗಿಲ್ಲ ಎಂದು ತಿಳಿದು ಬಂದಿದೆ.