- Advertisement -
- Advertisement -






ಸುರತ್ಕಲ್: ಯುವಕನೋರ್ವ ಹೃದಯಾಘಾತಕ್ಕೆ ಬಲಿಯಾದ ಘಟನೆ ಮಂಗಳೂರು ಹೊರವಲಯದ ಸುರತ್ಕಲ್ನಲ್ಲಿ ಬೆಳಕಿಗೆ ಬಂದಿದೆ.
ಕಾಂಗ್ರೆಸ್ ಮುಖಂಡ ಕೃಷ್ಣಾಪುರ ನಿವಾಸಿ ಮಂಗಳೂರು ಬಾವ ಅವರ ಪುತ್ರ ಮುಹಮ್ಮದ್ ಆಸಿಫ್ (24) ಹೃದಯಾಘಾತಕ್ಕೊಳಗಾದ ಯುವಕ.
ಗುರುವಾರ ಮನೆಯಲ್ಲಿದ್ದ ವೇಳೆ ಏಕಾಏಕಿ ಎದೆನೋವು, ಕೈಕಾಲು ನೋವು, ಬೆನ್ನು ನೋವು ಎಂದು ತಿಳಿಸಿದ್ದರು. ಬಳಿಕ ಎದೆನೋವು ಹೆಚ್ಚಾದ ಪರಿಣಾಮ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ.
- Advertisement -