Friday, May 10, 2024
spot_imgspot_img
spot_imgspot_img

ಸುರತ್ಕಲ್: ಹೃದಯಾಘಾತಕ್ಕೆ ಯುವಕ ಬಲಿ..!

- Advertisement -G L Acharya panikkar
- Advertisement -

ಸುರತ್ಕಲ್: ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿ ಯುವಕನೋರ್ವ ಮೃತಪಟ್ಟಿರುವ ಘಟನೆ ಸುರತ್ಕಲ್ ಇಡ್ಯಾ ಬೀಚ್‌ನಲ್ಲಿ ನಡೆದಿದೆ.

ಮೃತಪಟ್ಟ ಯುವಕನ್ನು ಮೃತಪಟ್ಟವರನ್ನು ಮೂಲತಃ ಕುಳಾಯಿ ನಿವಾಸಿ ಸದ್ಯ ಚೊಕ್ಕಬೆಟ್ಟು 8ನೇ ಬ್ಲಾಕ್ ಬಾಡಿಗೆ ಮನೆಯಲ್ಲಿ ವಾಸವಾಗಿದ್ದ ಚಾಯಬ್ಬ ಎಂಬವರ ಮಗ ಅಸ್ಗರ್ (32) ಎಂದು ಗುರುತಿಸಲಾಗಿದೆ.

ಚಾಲಕ ವೃತ್ತಿ ಮಾಡುತ್ತಿದ್ದ ಅಸ್ಗರ್ ಮಧ್ಯಾಹ್ನ ಇಡ್ಯಾ ಮಸೀದಿ ಸಮೀಪದ ಬೀಚ್‌ನಲ್ಲಿ ಸ್ನಾನಕೆಂದು ಬಂದಿದ್ದರು ಎನ್ನಲಾಗಿದೆ. ಇವರು ಸಮುದ್ರದಲ್ಲಿ ಸ್ನಾನ ಮಾಡುತ್ತಿದ್ದ ವೇಳೆ ಹೃದಯಾಘಾತಕ್ಕೊಳಗಾಗಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಘಟನಾ ಸ್ಥಳಕ್ಕೆ ಸುರತ್ಕಲ್‌ ಪೊಲೀಸರು ಭೇಟಿ ನೀಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!