Friday, June 27, 2025
spot_imgspot_img
spot_imgspot_img

ಕೇಂದ್ರ ಸಚಿವ ಸುರೇಶ್ ಅಂಗಡಿ ನಿಧನಕ್ಕೆ ಡಿ.ಕೆ ಶಿವಕುಮಾರ್ ಸಂತಾಪ.

- Advertisement -
- Advertisement -

ಬೆಂಗಳೂರು: ಕೆಲ ದಿನಗಳ ಹಿಂದಷ್ಟೇ ಕೋವಿಡ್ 19 ಸೋಂಕಿಗೆ ಒಳಗಾಗಿದ್ದ ಕೇಂದ್ರ ರೈಲ್ವೆ ಸಚಿವಾಲಯದ ರಾಜ್ಯ ಮಂತ್ರಿ ಸುರೇಶ್ ಅಂಗಡಿ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ.

‘ನಮ್ಮ ರಾಜ್ಯದ ಸಂಸದ ಹಾಗೂ ಕೇಂದ್ರ ಸಚಿವ ಸುರೇಶ್ ಅಂಗಡಿ ಅವರ ನಿಧನ ಆಘಾತ ತಂದಿದೆ.ಸ್ನೇಹ ಜೀವಿಯಾಗಿದ್ದ ಸುರೇಶ್ ಅಂಗಡಿ ಅವರು ರಾಜ್ಯದ ಬಗ್ಗೆ ಕಾಳಜಿ ಹೊಂದಿದ್ದರು. ರೈಲ್ವೆ ಸಚಿವರಾಗಿ ಅವರು ರಾಜ್ಯಕ್ಕೆ ಕೆಲವು ಯೋಜನೆ ತರಲು ಪ್ರಯತ್ನ ಪಟ್ಟಿದ್ದನ್ನು ನಾವು ನೋಡಿದ್ದೇವೆ.

ಅವರ ಈ ಅಕಾಲಿಕ ಮರಣ ಎಲ್ಲರನ್ನು ದಿಗ್ಭ್ರಮೆಗೆ ಒಳಪಡಿಸಿದೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ, ಅವರ ನಿಧನದ ನೋವನ್ನು ಭರಿಸುವ ಶಕ್ತಿಯನ್ನು ಭಗವಂತ ಅವರ ಕುಟುಂಬ ಸದಸ್ಯರಿಗೆ ಹಾಗೂ ಅವರ ಅಭಿಮಾನಿಗಳಿಗೆ ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಡಿ.ಕೆ ಶಿವಕುಮಾರ್ ತಮ್ಮ ಸಂತಾಪ ನುಡಿಯಲ್ಲಿ ತಿಳಿಸಿದ್ದಾರೆ.

- Advertisement -

Related news

error: Content is protected !!