- Advertisement -
- Advertisement -
ಮಂಗಳೂರು(ನ.11): ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಭೇಟಿ ನೀಡಿದರು.
ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರ ಧರ್ಮಸ್ಥಳ ಮಂಜುನಾಥ ಸ್ವಾಮಿ ದರ್ಶನ ಪಡೆದು ದೇವರಿಗೆ ಪೂಜೆ ಸಲ್ಲಿಸಿದರು.ಪೂಜೆ ಸಲ್ಲಿಕೆ ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರನ್ನು ಭೇಟಿ ಮಾಡಿದರು.
ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿ ಆಶೀರ್ವಾದ ಪಡೆದರು. ಹೆಗ್ಗಡೆಯವರ ಬಳಿ ಶಾಲೆಗಳನ್ನು ತೆರೆಬೇಕೋ ಅಥವಾ ಬೇಡವೋ ಎಂಬುದರ ಬಗ್ಗೆ ಚರ್ಚೆಯನ್ನು ನಡೆಸಿ ಅವರ ಬಳಿ ಅಭಿಪ್ರಾಯ ಪಡೆದರು. ಶಿಕ್ಷಣ ಕ್ಷೇತ್ರ ಎದುರಿಸುತ್ತಿರುವ ಸವಾಲುಗಳು ಬಗ್ಗೆಯೂ ಚರ್ಚೆ ನಡೆಸಿದರು. ಆನ್-ಲೈನ್ ಶಿಕ್ಷಣದ ಇತಿಮಿತಿಗಳ ಬಗ್ಗೆ ಹೆಗ್ಗಡೆಯವರ ಬಳಿ ಸುರೇಶ್ ಕುಮಾರ್ ರವರು ಸಲಹೆಗಳನ್ನು ಪಡೆದರು.
- Advertisement -